ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮದೇ ಸರ್ಕಾರದ ಹಗರಣಗಳನ್ನು ಬಯಲಿಗೆಳೆದು ಬೆನ್ನು ತಟ್ಟಿಸಿಕೊಂಡಿದ್ದಾರೆ. ತಮ್ಮ ಪಕ್ಷದ ನೇತೃತ್ವದ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲ ಆಗಿದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಇದೇ ವೇಳೆ ಅವರು ಕೋಮುವಾದಿ ಮನಸ್ಥಿತಿಯನ್ನು ಹೊರ ಹಾಕಿದ್ದಾರೆ. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಮರು ಮಾತ್ರ ಭಾಗಿಯಾಗಿದ್ದಾರೆ ಎಂದು ಬಿಂಬಿಸುವ ಸಲುವಾಗಿ ಕೆಲವೊಂದು ಹೆಸರನ್ನು ಮಾತ್ರ ಓದಿ ಹೇಳಿದ್ದಾರೆ. ಆ ಮೂಲಕ ಮತ್ತೊಮ್ಮೆ ಮುಸ್ಲಿಂ ಸಮುದಾಯದ ಮೇಲೆ ಗೂಬೆ ಕೂರಿಸುವ ತಮ್ಮ ಹಳೇಯ ಚಾಳಿಯನ್ನು ಮುಂದುವರಿಸಿದ್ದಾರೆ.
ದೇಶ ಹಾಗೂ ನಮ್ಮ ರಾಜ್ಯ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿರುವ ವೇಳೆಯಲ್ಲಿ ಸಂಸದರ ಸ್ಥಾನದಲ್ಲಿ ಇರುವ ಓರ್ವ ವ್ಯಕ್ತಿ ಈ ರೀತಿ ಹೇಳಿಕೆ ನೀಡಿರುವುದು ಶೋಭೆಯಲ್ಲ. ಎಲ್ಲರೂ ಒಟ್ಟಾಗಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಾದ ಈ ಸಂದರ್ಭದಲ್ಲಿ ಸಂಸದರ ಈ ಹೇಳಿಕೆ ಈ ಹೋರಾಟವನ್ನು ದುರ್ಬಲಗೊಳಿಸಲಿದೆ. ಈ ನಡುವೆ ಶಾಸಕರೊಬ್ಬರು ಮದರಸ ಬಗ್ಗೆಯೂ ಅವಹೇಳನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ. ಇದು ಮುಸ್ಲಿಂ ಸಮಾಜವನ್ನು ಮತ್ತೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಹುನ್ನಾರ. ಸಮಾಜದಲ್ಲಿ ಒಡಕು ಉಂಟು ಮಾಡುವ ಷಡ್ಯಂತ್ರ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಸಮಾಜದ ನಡುವೆ ಭಿನ್ನಾಭಿಪ್ರಾಯ ಸೃಜಿಸುವ ಇಂಥವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇವೆ.
ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ
(ರಾಜ್ಯಾಧ್ಯಕ್ಷರು,ಎಸ್ಸೆಸ್ಸೆಫ್ ಕರ್ನಾಟಕ)
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ