ಬೆಂಗಳೂರು, ಮೇ 05:ದೇಶದಲ್ಲಿ ಮಾತ್ರ ರಾಜ್ಯದಲ್ಲೂ ಕೊರೋನಾ ಅಟ್ಟಾಹಾಸ ಸದ್ಯಕ್ಕಂತು ನಿಲ್ಲುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ. ಇನ್ನೂ ರಾಜಧಾನಿ ಬೆಂಗಳೂರಂತು ಕೊರೋನಾ ಸಾವುಗಳಿಂದಾಗಿ ಅಕ್ಷರಶಃ ನರಕದಂತೆ ಭಾಸವಾಗುತ್ತಿದೆ. ಒಂದೆಡೆ ಪ್ರತಿದಿನ ಸಾವಿರಾರು ಜನ ಸೋಂಕಿಗೆ ತುತ್ತಾಗುತ್ತಿದ್ದರೆ, ಮತ್ತೊಂದೆಡೆ ಯಾರಿಗೂ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಲಭ್ಯವಾಗುತ್ತಿಲ್ಲ.
ಆದರೆ, ನಗರದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಲು ಬೆಡ್ ಬ್ಲಾಕಿಂಗ್ ದಂಧೆಯೇ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ದೂರಿದ್ದರು. ಅಲ್ಲದೆ, ಪ್ರಕರಣದ ಸಂಬಂಧ ಒಂದೇ ಕೋಮಿನ ಜನರ ಹೆಸರನ್ನು ಮಾತ್ರ ಹೆಸರಿಸಿದ್ದರು. ತೇಜಸ್ವಿ ಸೂರ್ಯ ಅವರ ಈ ನಡೆಗೆ ಹಲವೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದು ಕೋಮು ದ್ವೇಷ ಹರಡುವ ಕೃತ್ಯ ಎಂದು ಆರೋಪಿಸಲಾಗಿತ್ತು.
ಇದರ ಬೆನ್ನಿಗೆ ಇಂದು ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೊರೋನಾ ಸೋಂಕಿಗಿಂತ ಅಪಾಯಕಾರಿ ಸಂಸದ ತೇಜಸ್ವಿ ಸೂರ್ಯ ಅವರ ತಲೆಯಲ್ಲಿರುವ ಕೋಮು ದ್ವೇಷದ ವೈರಸ್” ಎಂದು ಹೇಳಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona— Siddaramaiah (@siddaramaiah) May 5, 2021
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ