ಬೆಂಗಳೂರು, ಮೇ 05:ದೇಶದಲ್ಲಿ ಮಾತ್ರ ರಾಜ್ಯದಲ್ಲೂ ಕೊರೋನಾ ಅಟ್ಟಾಹಾಸ ಸದ್ಯಕ್ಕಂತು ನಿಲ್ಲುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ. ಇನ್ನೂ ರಾಜಧಾನಿ ಬೆಂಗಳೂರಂತು ಕೊರೋನಾ ಸಾವುಗಳಿಂದಾಗಿ ಅಕ್ಷರಶಃ ನರಕದಂತೆ ಭಾಸವಾಗುತ್ತಿದೆ. ಒಂದೆಡೆ ಪ್ರತಿದಿನ ಸಾವಿರಾರು ಜನ ಸೋಂಕಿಗೆ ತುತ್ತಾಗುತ್ತಿದ್ದರೆ, ಮತ್ತೊಂದೆಡೆ ಯಾರಿಗೂ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಲಭ್ಯವಾಗುತ್ತಿಲ್ಲ.
ಆದರೆ, ನಗರದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಲು ಬೆಡ್ ಬ್ಲಾಕಿಂಗ್ ದಂಧೆಯೇ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ದೂರಿದ್ದರು. ಅಲ್ಲದೆ, ಪ್ರಕರಣದ ಸಂಬಂಧ ಒಂದೇ ಕೋಮಿನ ಜನರ ಹೆಸರನ್ನು ಮಾತ್ರ ಹೆಸರಿಸಿದ್ದರು. ತೇಜಸ್ವಿ ಸೂರ್ಯ ಅವರ ಈ ನಡೆಗೆ ಹಲವೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದು ಕೋಮು ದ್ವೇಷ ಹರಡುವ ಕೃತ್ಯ ಎಂದು ಆರೋಪಿಸಲಾಗಿತ್ತು.
ಇದರ ಬೆನ್ನಿಗೆ ಇಂದು ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೊರೋನಾ ಸೋಂಕಿಗಿಂತ ಅಪಾಯಕಾರಿ ಸಂಸದ ತೇಜಸ್ವಿ ಸೂರ್ಯ ಅವರ ತಲೆಯಲ್ಲಿರುವ ಕೋಮು ದ್ವೇಷದ ವೈರಸ್” ಎಂದು ಹೇಳಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona— Siddaramaiah (@siddaramaiah) May 5, 2021
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ