ಬೆಂಗಳೂರು, ಮೇ 05:ದೇಶದಲ್ಲಿ ಮಾತ್ರ ರಾಜ್ಯದಲ್ಲೂ ಕೊರೋನಾ ಅಟ್ಟಾಹಾಸ ಸದ್ಯಕ್ಕಂತು ನಿಲ್ಲುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ. ಇನ್ನೂ ರಾಜಧಾನಿ ಬೆಂಗಳೂರಂತು ಕೊರೋನಾ ಸಾವುಗಳಿಂದಾಗಿ ಅಕ್ಷರಶಃ ನರಕದಂತೆ ಭಾಸವಾಗುತ್ತಿದೆ. ಒಂದೆಡೆ ಪ್ರತಿದಿನ ಸಾವಿರಾರು ಜನ ಸೋಂಕಿಗೆ ತುತ್ತಾಗುತ್ತಿದ್ದರೆ, ಮತ್ತೊಂದೆಡೆ ಯಾರಿಗೂ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಲಭ್ಯವಾಗುತ್ತಿಲ್ಲ.
ಆದರೆ, ನಗರದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಲು ಬೆಡ್ ಬ್ಲಾಕಿಂಗ್ ದಂಧೆಯೇ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ದೂರಿದ್ದರು. ಅಲ್ಲದೆ, ಪ್ರಕರಣದ ಸಂಬಂಧ ಒಂದೇ ಕೋಮಿನ ಜನರ ಹೆಸರನ್ನು ಮಾತ್ರ ಹೆಸರಿಸಿದ್ದರು. ತೇಜಸ್ವಿ ಸೂರ್ಯ ಅವರ ಈ ನಡೆಗೆ ಹಲವೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದು ಕೋಮು ದ್ವೇಷ ಹರಡುವ ಕೃತ್ಯ ಎಂದು ಆರೋಪಿಸಲಾಗಿತ್ತು.
ಇದರ ಬೆನ್ನಿಗೆ ಇಂದು ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೊರೋನಾ ಸೋಂಕಿಗಿಂತ ಅಪಾಯಕಾರಿ ಸಂಸದ ತೇಜಸ್ವಿ ಸೂರ್ಯ ಅವರ ತಲೆಯಲ್ಲಿರುವ ಕೋಮು ದ್ವೇಷದ ವೈರಸ್” ಎಂದು ಹೇಳಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona— Siddaramaiah (@siddaramaiah) May 5, 2021
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ