ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಪಡೆದ ವಿದೇಶಿ ನೆರವಿನಲ್ಲಿ ಪಾರದರ್ಶಕತೆ ಏಕಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದಿಂದ ಉತ್ತರವನ್ನು ಬಯಸಿದ್ದಾರೆ.
ಕೋವಿಡ್ ವಿದೇಶಿ ನೆರವಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಭಾರತ ಯಾವೆಲ್ಲ ಸರಬರಾಜುಗಳನ್ನು ಗಿಟ್ಟಿಸಿಕೊಂಡಿದೆ? ಅದು ಎಲ್ಲಿದೆ? ಅದರಿಂದ ಯಾರು ಪ್ರಯೋಜನ ಪಡೆಯುತ್ತಿದ್ದಾರೆ? ಅವುಗಳನ್ನು ರಾಜ್ಯಗಳಿಗೆ ಹೇಗೆ ಹಂಚಲಾಗುತ್ತಿದೆ? ಪಾರದರ್ಶಕತೆ ಏಕಿಲ್ಲ? ಭಾರತ ಸರ್ಕಾರವೇ, ನಿಮ್ಮ ಬಳಿ ಉತ್ತರವಿದೆಯೇ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ವಿದೇಶದಿಂದ ಗಿಟ್ಟಿಸಿದ ಕೋವಿಡ್ ನೆರವಿನ ಬಗ್ಗೆ ಕಾಂಗ್ರೆಸ್ ಪಾರದರ್ಶಕತೆಯನ್ನು ಬಯಸುತ್ತಿದೆ. ಅದನ್ನು ಎಲ್ಲಿಂದ ಮತ್ತು ಹೇಗೆ ಬಳಸಲಾಗಿದೆ ಎಂಬುದರ ಕುರಿತು ದೇಶದ ಜನತೆಗೆ ವಿವರವನ್ನು ನೀಡುವಂತೆ ಸರ್ಕಾರವನ್ನು ಬಯಸಿದೆ.
ಮಗದೊಂದು ಟ್ವೀಟ್ನಲ್ಲಿ ಕೋವಿಡ್ ಬಿಕ್ಕಟ್ಟನ್ನು ನಿಯಂತ್ರಿಸುವಲ್ಲಿ ಮತ್ತು ಜನರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಲಸಿಕೆ ಇಲ್ಲ, ಉದ್ಯೋಗವೂ ಇಲ್ಲ. ಜನರು ಕೊರೊನಾ ವೈರಸ್ ತೀವ್ರತೆಯನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ’ ಎಂದು ಆರೋಪಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ