ಸೌದಿ ಅರೇಬಿಯಾ: ಡಿ.ಕೆ.ಎಸ್.ಸಿ ಕೇಂದ್ರ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹಾಗು ಇನ್ನಿತರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮರಾ ನಾಯಕ ಹಾಗು ಹಲವಾರು ಸಂಘ ಸಂಸ್ಥೆ ಸ್ಥಾಪನೆಗಳ ಹಿತೈಷಿಯೂ ಆಗಿದ್ದ ಹಾಜಿ ಹಾತಿಂ ಕಂಚಿ ಇವರು ಈದುಲ್ ಫಿತ್ರ್ ದಿನ ಈದ್ ನಮಾಜ್ ಬಳಿಕ ದಮ್ಮಾಮ್ ನಲ್ಲಿ ನಿಧನರಾಗಿದ್ದಾರೆ.
ದಮ್ಮಾಮ್ ನಲ್ಲಿ ಸ್ವಂತ ಹಜ್ ಉಮ್ರ ಟೂರಿಸ್ಟ್ ನಡೆಸುತ್ತಿದ್ದ ಅವರು ಕೊಡುಗೈ ದಾನಿಯೂ ಆಗಿದ್ದರು. ಮ್ರತರು ಹೆಂಡತಿ, ನಾಲ್ಕು ಹೆಣ್ಣು ಮಕ್ಕಳು ಹಾಗು ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರ ಅಕಾಳಿಕ ಮರಣವು ತುಂಬಲಾರದ ನಷ್ಟವಾಗಿದೆ. ಅವರ ಪಾರತ್ರಿಕ ಜೀವನವು ಉತ್ತಮವಾಗಿರಲೆಂದು ಅಲ್ಲಾಹನಲ್ಲಿ ಪ್ರಾರ್ಥಿಸುತ್ತ ಕೆ.ಸಿ.ಎಫ್ ಸೌದಿ ಅರೇಬಿಯಾ ಸಮಿತಿಯ ವತಿಯಿಂದ ಸಂತಾಪವನ್ನು ಸೂಚಿಸಿದೆ.

ಮರಣೋತ್ತರ ಕ್ರೀಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಿ ಹಾಗು ಇತರ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಅಂದರೆ ನಿನ್ನೆ ತಾ: ಮೇ 14 ರಂದು ದಮ್ಮಾಮ್ 91 ರಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಮ್ರತರ ಕುಟುಂಬದವರು, ಡಿ.ಕೆ.ಎಸ್.ಸಿ ಯ ಹಲವಾರು ನಾಯಕರು ಹಾಗು ಕೆ.ಸಿ.ಎಫ್ ನಾಯಕರು ಮತ್ತು ಗೆಳೆಯರು ಅಂತ್ಯಕ್ರೀಯೆಯಲ್ಲಿ ಭಾಗಿಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ