ಹೊಸದಿಲ್ಲಿ: ಮನೆಯಲ್ಲಿಯೇ ಮಾಡಬಹುದಾದ ಕೊರೊನಾ ರಾರಯಪಿಡ್ ಆ್ಯಂಟಿಜನ್ ಟೆಸ್ಟ್ ಕಿಟ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಸಮ್ಮತಿ ನೀಡಿದೆ. ಶೀಘ್ರವೇ ಮುಕ್ತ ಮಾರುಕಟ್ಟೆಯಲ್ಲಿ ಈ ಕಿಟ್ಗಳು ಲಭ್ಯ ಆಗಲಿವೆ. ”ಸೋಂಕು ಲಕ್ಷಣ ಉಳ್ಳ ವ್ಯಕ್ತಿಗಳಿಗೆ ಮಾತ್ರ ಈ ಕಿಟ್ ಬಳಸಿ ಹೋಮ್ ಟೆಸ್ಟ್ ಮಾಡಲು ಅನುಮತಿ ನೀಡಲಾಗಿದೆ. ಪಾಸಿಟಿವ್ ಪತ್ತೆಯಾದ ಬಳಿಕ ಅಂಥವರು ದೃಢೀಕರಣಕ್ಕಾಗಿ ಪ್ರಯೋಗಾಲಯವನ್ನು ಸಂಪರ್ಕಿಸಬೇಕು,” ಎಂದು ಸಲಹೆ ಮಾಡಲಾಗಿದೆ.
ಕೊವಿಸೆಲ್ಫ್ ಎಂಬ ಹೆಸರಿನ ಟೆಸ್ಟ್ ಕಿಟ್ಗೆ ಐಸಿಎಂಆರ್ ಅನುಮತಿ ನೀಡಿದ್ದು ಇದರ ವಿಧಾನದ ಮೂಲಕ 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರು ತಮಗೆ ತಾವೇ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ. 2 ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಹಿರಿಯರ ಸಹಾಯದಿಂದ ಈ ಪರೀಕ್ಷೆಯನ್ನು ಮನೆಯಲ್ಲೇ ಮಾಡಿಕೊಳ್ಳಬಹುದಾಗಿದೆ.ಈ ಕಿಟ್ ಲಭ್ಯವಿದೆ ಎಂದು ಎಲ್ಲರೂ ಬೇಕಾಬಿಟ್ಟಿ ಈ ವಿಧಾನ ಬಳಸುವಂತಿಲ್ಲ. ಬದಲಾಗಿ, ಯಾರಲ್ಲಿ ಕೊರೊನಾ ಲಕ್ಷಣ ಇದೆ ಮತ್ತು ಯಾರು ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆಯೋ ಅಂಥವರು ಈ ವಿಧಾನದ ಮೂಲಕ ಕೊರೊನಾ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.
ಕೊವಿಸೆಲ್ಫ್ ಕಿಟ್ನ್ನು ಬಳಸುವುದು ಹೇಗೆ?
ಕೊವಿಸೆಲ್ಫ್ ಕಿಟ್ನೊಂದಿಗೆ ಅದರ ಮೂಲಕ ಕೊರೊನಾ ಪರೀಕ್ಷೆ ನಡೆಸುವ ವಿಧಾನದ ವಿವರಣೆ ಇರುವ ಮ್ಯಾನುವಲ್ ಕೂಡ ಲಭ್ಯವಿರಲಿದೆ. ಹೆಚ್ಚುವರಿಯಾಗಿ ಐಸಿಎಮ್ಆರ್, ಪರೀಕ್ಷೆ ನಡೆಸಬೇಕಾದ ವಿಧಾನದ ಹಂತವನ್ನು ವಿಡಿಯೋ ಮೂಲಕವೂ ವಿವರಿಸಿದೆ.ಈ ಕಿಟ್ನಲ್ಲಿ ಮೂಗಿನ ದ್ರವ ಸಂಗ್ರಹಿಸುವ ಉಪಕರಣ, ಎಕ್ಸ್ಟ್ರಾಕ್ಷನ್ ಟ್ಯೂಬ್ ಮತ್ತು ಒಂದು ಟೆಸ್ಟ್ ಕಾರ್ಡ್ ಹೊಂದಿರುವ ಪೌಚ್ ಇರಲಿದೆ.ಕೊವಿಸೆಲ್ಫ್ ಮೂಲಕ ಪರೀಕ್ಷೆ ನಡೆಸಲು, ಬಳಕೆದಾರರು ಮೈಲ್ಯಾಬ್ (mylab) ಅಪ್ಲಿಕೇಷನ್ನ್ನು ತಮ್ಮ ಮೊಬೈಲ್ನಲ್ಲಿ ಹೊಂದಿರಬೇಕಿದೆ. ಮೂಗಿನ ದ್ರವ ಪಡೆದು ಟ್ಯೂಬ್ಗೆ ಅದನ್ನು ಹಾಕಬೇಕು. ಟ್ಯೂಬ್ನಲ್ಲಿ ಮೂಗಿನ ದ್ರವ ಇಳಿದುಕೊಳ್ಳುವಂತೆ ನೋಡಿಕೊಳ್ಳಬೇಕು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ