ಮನಾಮ: ಭಾರತ ಸೇರಿದಂತೆ ಐದು ದೇಶಗಳಿಂದ ಬಹ್ರೇನ್ಗೆ ಪ್ರವೇಶ ನಿರ್ಬಂಧಗಳು ಮೇ 23 ರ ಭಾನುವಾರದಿಂದ ಜಾರಿಗೆ ಬರಲಿವೆ.
ಇದರ ಪ್ರಕಾರ, ಬಹ್ರೇನ್ ನಾಗರಿಕರು, ನಿವಾಸ ವಿಸಾ ಹೊಂದಿರುವವರು ಮತ್ತು ಜಿಸಿಸಿ ನಾಗರಿಕರಿಗೆ ಮಾತ್ರ ಬಹ್ರೇನ್ಗೆ ಪ್ರವೇಶಿಸಲು ಅವಕಾಶವಿರುತ್ತದೆ. ಇದನ್ನು ನ್ಯಾಷನಾಲಿಟಿ, ಪಾಸ್ಪೋರ್ಟ್ ಎಂಡ್ ರೆಸಿಡೆಂಟ್ ಅಫೇರ್ಸ್ (ಎನ್ಪಿಆರ್ಎ) ಪ್ರಕಟಿಸಿವೆ.
ಹೊಸ ನಿಯಂತ್ರಣವು ಭಾರತ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ ಮತ್ತು ಬಾಂಗ್ಲಾದೇಶದ ಜನರಿಗೆ ಅನ್ವಯಿಸುತ್ತದೆ. ಆರು ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ದೇಶದಿಂದ ನಿರ್ಗಮಿಸುವ 48 ಗಂಟೆಗಳ ಒಳಗೆ ನಡೆಸಿದ ಕೋವಿಡ್ ಪರೀಕ್ಷೆಯ ನಕಾರಾತ್ಮಕ ಪ್ರಮಾಣಪತ್ರವನ್ನು ಪ್ರಸ್ತುತಪಡಿಸಬೇಕು. ಪ್ರಮಾಣಪತ್ರದಲ್ಲಿ ಕ್ಯೂಆರ್ ಕೋಡ್ ಕಡ್ಡಾಯವಾಗಿದೆ.
ಬಹ್ರೇನ್ನ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಮತ್ತು ಐದನೇ ಹಾಗೂ ಹತ್ತನೇ ದಿನದಂದು ಕೋವಿಡ್ ಪರಿಶೀಲಿಸಬೇಕು. ತಮ್ಮ ಸ್ವಂತ ನಿವಾಸದಲ್ಲಿ ಅಥವಾ ರಾಷ್ಟ್ರೀಯ ಆರೋಗ್ಯ ನಿಯಂತ್ರಣ ಪ್ರಾಧಿಕಾರವು ಅನುಮೋದಿಸಿದ ಹೋಟೆಲ್ನಲ್ಲಿ 10 ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಇದಕ್ಕಾಗಿ, ಸ್ವಂತ ಹೆಸರಿನಲ್ಲಿ ಅಥವಾ ಸಂಬಂಧಿಕರ ವಾಸ ಸ್ಥಳದ ಪುರಾವೆಗಳನ್ನು ನೀಡಬೇಕು. ಇಲ್ಲದಿದ್ದರೆ, ರಾಷ್ಟ್ರೀಯ ಆರೋಗ್ಯ ನಿಯಂತ್ರಣ ಪ್ರಾಧಿಕಾರವು ಅನುಮೋದಿಸಿದ ಹೋಟೆಲ್ಗಳಲ್ಲಿ ಕ್ವಾರಂಟೈನ್ ಉಳಿಯಬೇಕಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ