janadhvani

Kannada Online News Paper

ಎಸ್ ಡಿ ಪಿ ಐ ಬೆಳ್ತಂಗಡಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕರಾಳ ದಿನ ಆಚರಣೆ

ಬೆಳ್ತಂಗಡಿ,ಮೇ.26:ದೇಶದಾದ್ಯಂತ ರೈತರು ತಮ್ಮ ನ್ಯಾಯಬದ್ಧವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಪ್ರತಿಭಟನೆ ಕಳೆದ ಆರು ತಿಂಗಳಿಂದ ನಿರಂತರವಾಗಿ ನಡೆಯಿತ್ತಿದೆ. ಆದರೆ ದೇಶದ ಆಡಳಿತಾರೂಢ ಪಕ್ಷವು ರೈತರ ಬೇಡಿಕೆಯನ್ನು ಈಡೇರಿಸಲು ವಿಫಲವಾಗಿದೆ. ಮಾತ್ರವಲ್ಲ ಹಲವಾರು ತಂತ್ರಗಳನ್ನು ಹೂಡಿ ರೈತರ ಪ್ರತಿಭಟನೆ ಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದ್ದಾರೆ.ಇಂದು ದೇಶದಾದ್ಯಂತ ರೈತರು ನಡೆಸುತ್ತಿರುವ “ಪ್ರಜಾಪ್ರಭುತ್ವದ ಕರಾಳ ದಿನ” ಪ್ರತಿಭಟನೆಯನ್ನು ಬೆಂಬಲಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 20ಕಡೆ ಭಿತ್ತಿ ಪತ್ರ ಹಾಗೂ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.ತಾಲೂಕಿನಾದ್ಯಂತ ನಡೆದ ಈ ಪ್ರತಿಭಟನೆಯಲ್ಲಿ ಎಸ್. ಡಿ. ಪಿ. ಐ ಮುಖಂಡರು, ಕಾರ್ಯಕರ್ತರು, ಸದಸ್ಯರು ಹಾಗೂ ಬೆಂಬಲಿಗರು ಪಾಲ್ಗೊಂಡಿದ್ದರು.