ಕೊರೋನ ಎರಡನೇ ಅಲೆ ದೇಶಾದ್ಯಂತ ಅಟ್ಟಹಾಸ ಮೆರೆದಾಗ ಕರ್ನಾಟಕದಲ್ಲಿ ಸಮಾಜ ಸೇವೆಗಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಅಧೀನದಲ್ಲಿ ರಚಿಸಲಾದ ‘ಸಹಾಯ್’ ಎಂಬ ತುರ್ತು ಸೇವಾ ಸನ್ನದ್ಧ ತಂಡವು ರಾಜ್ಯಾದ್ಯಂತ ವಿವಿಧ ರೀತಿಯ ಸೇವೆ ಮಾಡಿ ಜಾತಿ ಧರ್ಮ ಭೇದವಿಲ್ಲದೆ ಸಮಾಜದ ಪ್ರಶಂಸೆಗೆ ಪಾತ್ರವಾಗಿದ್ದು, ಇದರ ‘ಸಹಾಯ್ ಎಲೈಟ್ ಅಲಯನ್ಸ್’ ರಚನೆಯು 28-05-2021 ರಂದು ಶುಕ್ರವಾರ 8 ಗಂಟೆಗೆ ನಡೆಯಲಿದೆ.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮುಫ್ತಿ ಅನ್ವರ್ ಅಲಿ ರವರು ಅಧ್ಯಕ್ಷತೆ ವಹಿಸಲಿದ್ದು, ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಖಾಝಿ ಸಯ್ಯಿದ್ ಫಝಲ್ ತಂಙಳ್ ಕೂರತ್, ಖಾಝಿ ಮಾಣಿ ಉಸ್ತಾದ್, ಕೊಡಗು ಸಹಾಯಕ ಖಾಝಿ ಮಹ್ಮೂದ್ ಮುಸ್ಲಿಯಾರ್, ಕಾವಳಕಟ್ಟೆ ಹಝ್ರತ್ ಸಹಿತವಿರುವ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೆ ಎಸ್.ವೈ.ಎಸ್, ಎಸ್.ಜೆ.ಎಂ, ಕೆಸಿಎಫ್ INC ನಾಯಕರು, ಎಸ್.ಎಂ.ಎ, ಎಸ್ಸೆಸ್ಸೆಫ್ ಇದರ ರಾಜ್ಯ ನಾಯಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ