ದೆಹಲಿ: ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಹಂತ ಹಂತವಾಗಿ ಇಳಿಕೆಯಾಗುತ್ತಿದ್ದರೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆ ಆಗಿಲ್ಲ. ಹಾಗಾಗಿ ಕೊವಿಡ್-19 ಪ್ರಕರಣಗಳ ಹರಡುವಿಕೆ ತಡೆಗಟ್ಟಲು ಲಾಕ್ಡೌನ್, ಕಠಿಣ ನಿಯಮಾವಳಿಗಳನ್ನು ಜೂನ್ 30ರ ವರೆಗೆ ಮುಂದುವರಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಏಪ್ರಿಲ್ 29ರಂದು ಕೇಂದ್ರ ಗೃಹ ಇಲಾಖೆ ಹೊರಡಿಸಿದ್ದ ಆಜ್ಞೆಯಂತೆ ಮತ್ತು ಏಪ್ರಿಲ್ 25ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದ್ದ ಮಾರ್ಗಸೂಚಿಗಳಂತೆ ಕೊವಿಡ್-19 ಸೋಂಕು ತಡೆಯ ಮಾರ್ಗಸೂಚಿಗಳು ಜೂನ್ 30ರ ವರೆಗೆ ಊರ್ಜಿತವಾಗಿರುತ್ತದೆ ಎಂದು ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿರುವ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಕೊರೊನಾ ಸೋಂಕಿನ ವಿರುದ್ಧ ಕೈಗೊಂಡ ಕಠಿಣ ನಿಯಮಾವಳಿಗಳು, ಕಂಟೈನ್ಮೆಂಟ್ ಮತ್ತು ಇತರ ನಿಯಮಾವಳಿಗಳಿಂದಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕೊರೊನಾ ಹೊಸ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೂ ಸದ್ಯ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಇನ್ನಷ್ಟು ಇಳಿಕೆಯಾಗಬೇಕಿದೆ. ಹಾಗಾಗಿ, ಸೂಕ್ತ ನಿಯಮಗಳನ್ನು ಮುಂದುವರಿಸಲು ಪತ್ರದಲ್ಲಿ ಹೇಳಲಾಗಿದೆ.
ನಿಯಮಾವಳಿಗಳಲ್ಲಿ ಯಾವುದೇ ಸಡಿಲಿಕೆ ಮಾಡುವುದಿದ್ದರೂ ಅದನ್ನು ಹಂತಹಂತವಾಗಿ, ಪರಿಸ್ಥಿತಿಯನ್ನು ಅವಲೋಕಿಸಿ ಮಾಡಬೇಕು. ಸ್ಥಳೀಯ ವ್ಯವಸ್ಥೆ, ಸಂಪನ್ಮೂಲವನ್ನು ಕೂಡ ಈ ನೆಲೆಯಲ್ಲಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಕೊರೊನಾದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು, ಪ್ರಭಾವ ಕಡಿಮೆ ಮಾಡಲು ಜೂನ್ 30ರ ವರೆಗೆ ಕಠಿಣ ನಿಯಮಾವಳಿ ಮುಂದುವರಿಸುವಂತೆ ಸಲಹೆ ನೀಡಲಾಗಿದೆ.
ಕೇವಲ ಹೆಸರಿಗಷ್ಟೇ ನಿಯಮಾವಳಿಗಳು ಇರುವುದಲ್ಲ. ಅದನ್ನು ಸೂಕ್ತ ರೀತಿಯಲ್ಲಿ ಜಾರಿಗೆ ತರಬೇಕು. ಅಧಿಕಾರಿಗಳು, ಜಿಲ್ಲಾ, ಸ್ಥಳೀಯ ಆಡಳಿತ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನಸಾಮಾನ್ಯರು ಕೊವಿಡ್ ನಿಯಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ