ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ. ಪ್ರತಿಯೊಬ್ಬರೂ ರಕ್ತದಾನ ನೀಡುವ ಮೂಲಕ ಮಾನವೀಯತೆಯ ಮನೋಭಾವನೆಗಳನ್ನು ಬೆಳೆಸಬೇಕು, ಎಂಬ ಸಂದೇಶದೊಂದಿಗೆ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಶಿಬಿರದಲ್ಲಿ ಬರೋಬ್ಬರಿ ಒಟ್ಟು 105 ಜೀವದಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ದಾಖಲೆ ನಿರ್ಮಿಸಿದ್ದರು.




ಜಾತಿ ಮತ ಪಂಗಡಗಳನ್ನು ಮರೆತು ,ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭವ್ಯ ಭಾರತದ ವಿವಿಧ ಭಾಗಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಅನಿವಾಸಿ ಕನ್ನಡಿಗರ ಒಕ್ಕೂಟ.ಯು ಎ ಇ ಇದರ ಕಾರ್ಯಕ್ರಮಕ್ಕೆ ಪ್ರೀತಿಯಿಟ್ಟು ಕ್ಲಪ್ತ ಸಮಯಕ್ಕೆ ಬಂದು ರಕ್ತದಾನ ಮಾಡಿ ಜೀವದಾನಿಗಳಾದರು.
ಈ ಅಚ್ಚುಕಟ್ಟಾದ ಯಶಸ್ವಿ ರಕ್ತದಾನ ಶಿಬಿರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಲತೀಫಾ ಆಸ್ಪತ್ರೆಯ ಆಡಳಿತ ಮಂಡಳಿಯವರು ಅನಿವಾಸಿ ಕನ್ನಡಿಗರ ಒಕ್ಕೂಟ ಇದರ ಕಾರ್ಯ ವೈಖರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ
ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ಅಧ್ಯಕ್ಷರಾಗಿರುವ ಜನಾಬ್ ಶಂಸುದ್ದೀನ್ ಉಡುಪಿಯವರು ಅಭಿನಂದನಾ ಪತ್ರ ನೀಡಿ ಗೌರವಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ