ಕೋಝಿಕ್ಕೋಡ್| ಲಕ್ಷದ್ವೀಪದ ಜನರ ಇಚ್ಛೆಗೆ ವಿರುದ್ಧವಾಗಿ ಕಾನೂನು ಜಾರಿಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಅವರು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರಿಗೆ ದೂರವಾಣಿ ಮೂಲಕ ಈ ಭರವಸೆ ನೀಡಿದ್ದಾರೆ. ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಕಾನೂನುಗಳು ದ್ವೀಪವಾಸಿಗಳ ಜೀವನ ಮತ್ತು ಸಂಸ್ಕೃತಿಗೆ ಅಪಾಯವನ್ನುಂಟುಮಾಡುವ ಕಾರಣ ಶೀಘ್ರದಲ್ಲೇ ಮಧ್ಯಪ್ರವೇಶಿಸುವಂತೆ ಕೋರಿ ಕಾಂತಪುರಂ ಉಸ್ತಾದರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.ಪತ್ರಕ್ಕೆ ಪ್ರತ್ಯುತ್ತರವಾಗಿ ನೇರವಾಗಿ ಕರೆ ಮಾಡಿ ಕೇಂದ್ರ ಗೃಹ ಸಚಿವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾಗಿ ಕಾಂತಪುರಂ ಉಸ್ತಾದ್ ತಮ್ಮ ಫೇಸ್ಬುಕ್ ಪುಟದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ ಉಲ್ಲೇಖಿಸಿರುವ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದ್ದಾಗಿ ಗೃಹ ಸಚಿವರು ಹೇಳಿದ್ದಾರೆ. ಕೇಂದ್ರ ಸರ್ಕಾರವು ಲಕ್ಷದ್ವೀಪ ಜನರೊಂದಿಗಿದೆ. ದ್ವೀಪದ ಜನರ ಸಂಸ್ಕೃತಿ ಮತ್ತು ಜೀವನ ವಿಧಾನವನ್ನು ರಕ್ಷಿಸುವ ಕ್ರಮಗಳೊಂದಿಗೆ ಕೇಂದ್ರ ಸರ್ಕಾರ ನಿಲ್ಲುತ್ತದೆ. ಯಾವುದೇ ಆತಂಕ ಬೇಡ, ಜನ ವಿರೋಧಿ ಚಟುವಟಿಕೆಗಳು ಇರುವುದಿಲ್ಲ ಎಂದು ಅಮಿತ್ ಶಾ ಹೇಳಿದರು.
ಅದೇ ಸಮಯದಲ್ಲಿ, ದ್ವೀಪವಾಸಿಗಳು ಇನ್ನೂ ಆಳವಾದ ಆತಂಕದಲ್ಲಿದ್ದಾರೆ. ಕಳೆದ ಆರು ತಿಂಗಳಲ್ಲಿ ಅವರ ಮೇಲೆ ವಿಧಿಸಲಾದ ಕಾನೂನುಗಳನ್ನು ರದ್ದುಪಡಿಸಿಬೇಕು ಎಂದು ಕಾಂತಪುರಂ ಸಂಭಾಷಣೆ ವೇಳೆಯಲ್ಲಿ ಹೇಳಿದ್ದಾರೆ. ಜನರ ಇಚ್ಛೆಗೆ ವಿರುದ್ಧವಾಗಿ ಜಾರಿಗೊಳಿಸಲಾದ ಹೊಸ ಕಾನೂನುಗಳನ್ನು ರದ್ದುಪಡಿಸಿದರೆ ಮಾತ್ರ
ಜನರು ಆತಂಕದಿಂದ ಮುಕ್ತರಾಗುವರು ಎಂದು ಎ. ಪಿ. ಉಸ್ತಾದ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ