ಬೆಂಗಳೂರು: ಯಾವುದೇ ಧರ್ಮವನ್ನು ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಮೂಲಭೂತ ಹಕ್ಕನ್ನು ಯಾವ ಧರ್ಮಕ್ಕೂ ಪ್ರದಾನ ಮಾಡಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬಂಟ್ವಾಳದ ಪ್ರೆಸಿಲ್ಲಾ ಡಿಸೋಜ ಹಾಗೂ ಮಂಗಳೂರಿನ ಸ್ಯಾಮ್ಸನ್ ಜಾನ್, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಬಂಟ್ವಾಳ ನ್ಯಾಯಾಲಯ ತಮ್ಮ ವಿರುದ್ಧ ಕಾಗ್ನಿಜೆನ್ಸ್ ಪಡೆದು ವಿಚಾರಣೆ ಕೈಗೆತ್ತಿಕೊಂಡಿರುವ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ವಿಚಾರಣೆ ನಡೆಸಿದ ನ್ಯಾ. ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ತನ್ನ ತೀರ್ಪಿನಲ್ಲಿ ಈ ಆರೋಪಿತರ ವಿರುದ್ಧ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪವಿದೆ.
ಭಗವದ್ಗೀತೆ ಹಾಗೂ ಖುರಾನ್ನಲ್ಲಿ ಹೇಳಿರದ ವಿಷಯಗಳನ್ನು ಬೈಬಲ್ನಲ್ಲಿ ಹೇಳಿದ್ದು, ಭೂಮಿಗೆ ಸುನಾಮಿ ಬಂದಾಗ ಏಸು ಮಾತ್ರ ಕಾಪಾಡುತ್ತಾರೆ. ಬೈಬಲ್ ಮಾತ್ರ ಶಾಂತಿ ನೀಡುತ್ತದೆ ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸರು ಐಪಿಸಿ ಸೆಕ್ಷನ್ 298ರಡಿ ಎಫ್ಐಆರ್ ದಾಖಲಿಸಿದ್ದಾರೆ. ಅರ್ಜಿದಾರರು ಈ ಕ್ರಮವನ್ನು ಸಂವಿಧಾನದ ವಿಧಿ 14, 21 ಹಾಗೂ 25ರ ಉಲ್ಲಂಘನೆ ಎಂದು ಪ್ರತಿಪಾದಿಸಿದ್ದಾರೆ.
ಆದರೆ, ಯಾವುದೇ ಧರ್ಮದ ಕುರಿತು ಧಾರ್ಮಿಕ ಮುಖಂಡ ಅಥವಾ ವ್ಯಕ್ತಿ ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಹಕ್ಕನ್ನು ಮೂಲಭೂತ ಹಕ್ಕುಗಳಲ್ಲಿ ನೀಡಲಾಗಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮಧುರಾ ಎಂಬುವರು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ