ಬೆಂಗಳೂರು: ಯಾವುದೇ ಧರ್ಮವನ್ನು ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಮೂಲಭೂತ ಹಕ್ಕನ್ನು ಯಾವ ಧರ್ಮಕ್ಕೂ ಪ್ರದಾನ ಮಾಡಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬಂಟ್ವಾಳದ ಪ್ರೆಸಿಲ್ಲಾ ಡಿಸೋಜ ಹಾಗೂ ಮಂಗಳೂರಿನ ಸ್ಯಾಮ್ಸನ್ ಜಾನ್, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಬಂಟ್ವಾಳ ನ್ಯಾಯಾಲಯ ತಮ್ಮ ವಿರುದ್ಧ ಕಾಗ್ನಿಜೆನ್ಸ್ ಪಡೆದು ವಿಚಾರಣೆ ಕೈಗೆತ್ತಿಕೊಂಡಿರುವ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ವಿಚಾರಣೆ ನಡೆಸಿದ ನ್ಯಾ. ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠ ತನ್ನ ತೀರ್ಪಿನಲ್ಲಿ ಈ ಆರೋಪಿತರ ವಿರುದ್ಧ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪವಿದೆ.
ಭಗವದ್ಗೀತೆ ಹಾಗೂ ಖುರಾನ್ನಲ್ಲಿ ಹೇಳಿರದ ವಿಷಯಗಳನ್ನು ಬೈಬಲ್ನಲ್ಲಿ ಹೇಳಿದ್ದು, ಭೂಮಿಗೆ ಸುನಾಮಿ ಬಂದಾಗ ಏಸು ಮಾತ್ರ ಕಾಪಾಡುತ್ತಾರೆ. ಬೈಬಲ್ ಮಾತ್ರ ಶಾಂತಿ ನೀಡುತ್ತದೆ ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸರು ಐಪಿಸಿ ಸೆಕ್ಷನ್ 298ರಡಿ ಎಫ್ಐಆರ್ ದಾಖಲಿಸಿದ್ದಾರೆ. ಅರ್ಜಿದಾರರು ಈ ಕ್ರಮವನ್ನು ಸಂವಿಧಾನದ ವಿಧಿ 14, 21 ಹಾಗೂ 25ರ ಉಲ್ಲಂಘನೆ ಎಂದು ಪ್ರತಿಪಾದಿಸಿದ್ದಾರೆ.
ಆದರೆ, ಯಾವುದೇ ಧರ್ಮದ ಕುರಿತು ಧಾರ್ಮಿಕ ಮುಖಂಡ ಅಥವಾ ವ್ಯಕ್ತಿ ಪ್ರತಿಪಾದಿಸುವಾಗ ಮತ್ತೊಂದು ಧರ್ಮವನ್ನು ಕೀಳಾಗಿ ಬಿಂಬಿಸುವ ಹಕ್ಕನ್ನು ಮೂಲಭೂತ ಹಕ್ಕುಗಳಲ್ಲಿ ನೀಡಲಾಗಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮಧುರಾ ಎಂಬುವರು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?