ಬೆಂಗಳೂರು,ಜೂ.10: ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ರಾಜ್ಯದಲ್ಲಿ ಜೂನ್ 14ರ ಬಳಿಕ ಅನ್ಲಾಕ್ ಆದರೂ ಆ 8 ಜಿಲ್ಲೆಗಳಲ್ಲಿ ಲಾಕ್ಡೌನ್ ಇರಲಿದೆ. ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಡಿಸಿಗಳ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ 8 ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದು ಜಿಲ್ಲಾಡಳಿತಗಳ ಡಿಸಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಬಿಎಸ್ವೈ ಕಳವಳಗೊಂಡಿದ್ದಾರೆ. ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಆ ಜಿಲ್ಲೆಗಳಲ್ಲಿ ಜನರು ಕೊವಿಡ್ ನಿಯಮ ಉಲ್ಲಂಘಿಸದಂತೆ ಕ್ರಮಕೈಗೊಳ್ಳಿ. ಈ ಹಿಂದೆ 8 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ಹೇಳಿದ್ದೀರಿ. ಅದರಂತೆ ಸೋಂಕು ಕಡಿಮೆಯಾಗದ ಕಾರಣ ಒಂದು ವಾರ ಲಾಕ್ಡೌನ್ ಮುಂದುವರಿಸೋಣ ಆದ್ರೆ ಲಾಕ್ಡೌನ್ ಜತೆಗೆ ಏನು ವಿನಾಯಿತಿ ನೀಡಬೇಕಾಗಿದೆ. ಈ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ ಎಂದು ಸಿಎಂ ಬಿಎಸ್ವೈ ಆದೇಶಿಸಿದ್ದಾರೆ.
ಡಿಸಿ, ಉಸ್ತುವಾರಿ ಸಚಿವರಿಗೆ ಜವಾಬ್ದಾರಿ
ನೀವು ಹೇಳಿದಂತೆ ಲಾಕ್ಡೌನ್ ವಿಸ್ತರಣೆ ಮಾಡೋಣ. ಆದರೆ ಹೇಗೆ ಮಾಡಬೇಕೆಂದು ಚರ್ಚೆ ಮಾಡಿ. ಎಲ್ಲವನ್ನೂ ನಾವು ಇಲ್ಲಿಂದ ಕುಳಿತು ಹೇಳಲು ಆಗಲ್ಲ. ಜಿಲ್ಲೆಗಳಲ್ಲಿಯೇ ನೀವು ಚರ್ಚೆ ಮಾಡಿ ಮಾಹಿತಿ ತಿಳಿಸಿ. ಪಾಸಿಟಿವಿಟಿ ಕಡಿಮೆ ಮಾಡಲು ಕ್ರಮವಹಿಸಿ ಎಂದು ಡಿಸಿ, ಉಸ್ತುವಾರಿ ಸಚಿವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಜವಾಬ್ದಾರಿ ನೀಡಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ತೀವ್ರತೆ ಕಡಿಮೆಯಾಗುತ್ತಿದೆ. ಆದರೆ ಈ ಎಂಟು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆ ಆಗುತ್ತಿಲ್ಲ. ಮೈಸೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚು ಇರುವುದು ಕಳವಳಕ್ಕೆ ಕಾರಿಣವಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ