ಬೆಂಗಳೂರು,ಜೂ.10: ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ 11 ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂ. 21ರವರೆಗೆ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಲಾಕ್ಡೌನ್ ಸಡಿಲಿಕೆ ಕುರಿತು ಇಂದು ಅಧಿಕಾರಿಗಳು, ಸಚಿವರು, ತಜ್ಞರೊಂದಿಗೆ ಅವರು ಸಭೆ ನಡೆಸಿದರು.
ಇದಾದ ಬಳಿಕ ಮಾತನಾಡಿರುವ ಅವರು. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆ ಹೊರತು ಪಡಿಸಿ ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಸೋಂಕಿನ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ. ರಾಜ್ಯಾದ್ಯಾಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇದರ ಜೊತೆ ಪ್ರತಿನಿತ್ಯ ರಾತ್ರಿ ಕರ್ಫ್ಯೂ ಕೂಡ ಜಾರಿಯಲ್ಲಿರಲಿದೆ. ಅಂತರ ಜಿಲ್ಲೆ ಸಂಚಾರಕ್ಕೆ ಅವಕಾಶವಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ ಎಂದು ಅವರು ತಿಳಿಸಿದರು.
ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧ ಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದ ಅವರು ಪಾಸಿಟಿವಿಟಿ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ ಎಂದರು.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್ಡೌನ್ ಮಾರ್ಗಸೂಚಿಯನ್ನು ಜೂ 21ರವರೆಗೆ ಮುಂದುವರೆಸಬೇಕು. ಇದರಲ್ಲಿ ಯಾವುದೇ ಬದಾವಣೆ ಇಲ್ಲ. ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದರು.
ಉಳಿದ 19 ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ. ಇದರ ಜೊತೆ ವಾರಾಂತ್ಯದಲ್ಲಿ ಕರ್ಫ್ಯೂ ಮುಂದುವರೆಯಲಿದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರವರೆಗೂ ಅವಕಾಶ ನೀಡಲಾಗಿದೆ
ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
- ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ಅದರಲ್ಲೂ ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನಿಡಲಾಗಿದೆ.
- ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
- ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
- ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
- ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ನಿಯಮಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಬೇಕು. ಈ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ