ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪರೀಕ್ಷೆ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್ ಸುತ್ತೋಲೆ ನೀಡಿದೆ. ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 2 ವಿಷಯಗಳಿಗೆ ಪರೀಕ್ಷೆ ನಡೆಸಲು ಬೋರ್ಡ್ ಸೂಚನೆ ನೀಡಿದೆ. ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪಿಯು ಬೋರ್ಡ್ 2 ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.
ಪ್ರಥಮ ಪಿಯುಸಿಗೆ ಆನ್ ಲೈನ್ ಪರೀಕ್ಷೆ ಹೇಗೆ?
- ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು
- ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್, ಇ–ಮೇಲ್, ಅಂಚೆ ಮೂಲಕ ರವಾನಿಸಬೇಕು
- ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನು ಕಳುಹಿಸಬೇಕು.
- ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು.
- ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs (ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ) ಮೂಲಕ ಫಲಿತಾಂಶ ಅಪ್ಲೋಡ್ ಮಾಡಬೇಕು.
- ಅಸಿಸ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ.
ಮೊದಲ ಅಸಿಸ್ಮೆಂಟ್ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು. ಅದೇ ರೀತಿ ಎರಡನೇ ಅಸಿಸ್ಮೆಂಟ್ ಜೂನ್ 26 ರಿಂದ ಜುಲೈ 5ರ ಒಳಗೆ ನಡೆಸಬೇಕು.
ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಜುಲೈ 20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಿರಬೇಕು. ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ಡೆಡ್ ಲೈನ್ ವಿಧಿಸಲಾಗಿದೆ.
ಮೌಲ್ಯಮಾಪನ ಪ್ರಕ್ರಿಯೆ ಹೇಗೆ ಮಾಡ್ಬೇಕು?
ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು. ಪ್ರಯೋಗ ಸಹಿತಿ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕಿದೆ. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಸುತ್ತೋಲೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ