ಬೆಂಗಳೂರು: ಕೊರೊನಾ ವಾರಿಯರ್ಸ್ ಹೊರತಾಗಿಯೂ ಸೋಂಕಿನಿಂದ ಮೃತಪಟ್ಟ ಜನಸಾಮಾನ್ಯರ ಕುಟುಂಬಕ್ಕೆ ಪರಿಹಾರ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು. ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ಕೊರೊನಾಗೆ ಬಲಿಯಾದ ಜನಸಾಮಾನ್ಯರಿಗೆ ಪರಿಹಾರ ನೀಡಲು ಮುಂದಾಗಿದೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡುದಾರರಿಗೆ ಈ ಯೋಜನೆ ಅನ್ವಯಿಸಲಿದೆ. ಹಲವು ಕುಟುಂಬಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆದರೆ ಒಂದು ಕುಟುಂಬದಲ್ಲಿ ಎಷ್ಟೇ ಮಂದಿ ಕೊರೊನಾದಿಂದ ಸತ್ತಿದ್ದರು ಒಬ್ಬರ ಸಾವಿಗೆ ಮಾತ್ರ ಪರಿಹಾರ ನೀಡಲಾಗುತ್ತೆ.
ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,913 ಮಂದಿ (ಜೂ.13ರವರೆಗೆ) ಮೃತಪಟ್ಟಿದ್ದಾರೆ. ಇದರಲ್ಲಿ BPL ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಒಬ್ಬರ ಸಾವಿಗೆ ಪರಿಹಾರ ನೀಡಲಾಗುವುದು. ಇದಕ್ಕಾಗಿ ರಾಜ್ಯ ಸರ್ಕಾರ 250ರಿಂದ 300 ಕೋಟಿಗಳಷ್ಟು ಹಣವನ್ನು ಮೀಸಲಿಟ್ಟಿದೆ. ಈ ಹಣ ಸುಮಾರು 25 ಸಾವಿರ ಬಿಪಿಎಲ್ ಕುಟುಂಬ ವರ್ಗದವರಿಗೆ ಪರಿಹಾರ ಸಿಗಲಿದೆ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ. ಇವತ್ತು ಹಣಕಾಸಿನ ಅಧಿಕಾರಿಗಳ ಜೊತೆಯೂ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ ಎಂದರೆ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿದೆ ಎಂಬುದು ಗೊತ್ತಾಗುತ್ತೆ. ಕೊರೊನಾದಿಂದ ಮೃತಪಟ್ಟವರ ಪರಿಹಾರ ಯೋಜನೆಗೆ 250-300 ಕೋಟಿ ಹಣ ವೆಚ್ಚವಾಗುತ್ತೆ.
ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ ಈ ಪರಿಹಾರ ಯೋಜನೆ ಕೊರೊನಾ ಎರಡು ಅಲೆಗಳಲ್ಲಿ ಸತ್ತವರಿಗೆ ಅನ್ವಯ ಆಗಲಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1ಲಕ್ಷ ಪರಿಹಾರ ಸಿಗಲಿದೆ. ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ ಪರಿಹಾರ ಇಲ್ಲ. ಒಂದು ಕುಟುಂಬದಲ್ಲಿ ಎಷ್ಟೇ ಜನ ಮೃತಪಟ್ಟಿದ್ದರೂ ಒಬ್ಬರಿಗೆ ಮಾತ್ರ ಪರಿಹಾರ. ಅದು ದುಡಿಯುವ ವ್ಯಕ್ತಿಗೆ ( ವಯಸ್ಕ) ಮಾತ್ರ ಪರಿಹಾರ ಸಿಗಲಿದೆ. ವಯಸ್ಸಾದವರೂ, ಚಿಕ್ಕಮಕ್ಕಳು ಸತ್ತಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಒಂದು ವೇಳೆ ಅಪ್ಪ-ಅಮ್ಮ ಇಬ್ಬರೂ ತೀರಿಕೊಂಡರು ಅವರ ಖಾತೆಗೆ ಹಣ ಜಮಾವಣೆ ಮಾಡಲಾಗುವುದು. ಯಾವ ರೀತಿ ಪರಿಹಾರ ಪಡೆಯಬಹುದು ಎಂಬುದರ ಬಗ್ಗೆ ಇಂದು ಸಂಜೆ ಅಥವಾ ನಾಳೆ ಒಳಗೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ತಂದೆ-ತಾಯಿ ಇಬ್ಬರು ಕೊರೊನಾಗೆ ಬಲಿಯಾಗಿದ್ದ ಅವರ ಮಕ್ಕಳಿಗೂ ಈ ಪರಿಹಾರ ಮೊತ್ತ ಸಿಗಲಿದೆ. ಪ್ರಧಾನಿ ಮೋದಿ ಘೋಷಿಸಿರುವಂತೆ 10 ಲಕ್ಷದ ಪರಿಹಾರದ ಜೊತೆ ರಾಜ್ಯ ಸರ್ಕಾರದ 1 ಲಕ್ಷವೂ ಸೇರಲಿದೆ. ಕೊರೊನಾದಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ಮಕ್ಕಳಿಗೆ ತಲಾ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ