ಮಂಗಳೂರು: ನಗರದಿಂದ ಬಜಪೆ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮರವೂರು ಸೇತುವೆಯ ಮೊದಲ ಅಂಕಣದ ( ಮೊದಲ ಪಿಲ್ಲರ್ ಬಳಿ) ಸುಮಾರು ಮೂರು ಅಡಿಗಳಷ್ಟು ಸೇತುವೆ ಕುಸಿದಿದೆ.

ಮಂಗಳೂರಿನಿಂದ ಬಜಪೆ ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ಕಿನ್ನಿಗೋಳಿ ಮುಂತಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ. ಸೇತುವೆ ಬಿರುಕು ಬಿಟ್ಟ ಕಾರಣ ಈ ಪ್ರಮುಖ ಸಂಪರ್ಕ ಕೊಂಡಿ ತಪ್ಪಿದಂತಾಗಿದೆ.
ಮರವೂರು ಸೇತುವೆ ಬಿರುಕು ಹಿನ್ನೆಲೆಯಲ್ಲಿಕಾವೂರು -ಕೂಳೂರು- ಕೆ ಬಿ ಎಸ್- ಜೋಕಟ್ಟೆ- ಪೋರ್ಕೊಡಿ-ಬಜಪೆ ಅಥವಾ ಪಚ್ಚನಾಡಿ- ವಾಮಂಜೂರ್- ಗುರುಪುರ- ಕೈಕಂಬ- ಬಜಪೆ ಬದಲಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ.
2018ರಲ್ಲಿ ಬಂಟ್ವಾಳ ತಾಲೂಕಿನ ಮೂಲರಪಟ್ನದ ಸೇತುವೆ ಕುಸಿದು ಬಿದ್ದಿತ್ತು. ಇದರಿಂದಾಗಿ ಇಲ್ಲಿನ ಸಂಚಾರ ವ್ಯವಸ್ಥೆಗೂ ತೊಡಕಾಗಿತ್ತು. ನೂತನ ಸೇತುವೆ ನಿರ್ಮಾಣದ ಕಾರ್ಯ ನಡೆಯುತ್ತಿದೆ. ಇದೀಗ ಜಿಲ್ಲೆಯ ಮತ್ತೊಂದು ಸೇತುವೆಯಲ್ಲಿ ಬಿರುಕು ಕಂಡುಬಂದಿದ್ದು, ಜಿಲ್ಲೆಯ ಸೇತುವೆಗಳ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಆಗ್ರಹ ಕೇಳಿಬಂದಿದೆ.
ಏರ್ ಪೋರ್ಟ್ ದಾರಿ: ಮಂಗಳೂರಿನ ಕಾವೂರಿನಿಂದ ಏರ್ ಪೋರ್ಟ್ ಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಿಮಾನ ನಿಲ್ದಾಣಕ್ಕೆ ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ -ಗುರುಪುರ ರಸ್ತೆಯಾಗಿ ಎರ್ ಪೂರ್ಟ್ ಗೆ ತೆರಳಲು ಸೂಚನೆ ನೀಡಲಾಗಿದೆ. ಉಡುಪಿ ಕಡೆಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ಏರ್ ಪೋರ್ಟ್ ತೆರಳಲು ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ