ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉಪವಿಭಾಗ ಅಧಿಕಾರಿ ಮದನ್ ಮೋಹನ್ ನೇತೃತ್ವದ ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ದಿನದಿಂದ ಮಂಗಳಾದೇವಿ ದೇವಸ್ಥಾನದ ಪ್ರವೇಶ ದ್ವಾರಕ್ಕೆ ಗೇಟ್ ಹಾಕಿ ಭಕ್ತರಿಗೆ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ದೇವಸ್ಥಾನದ ಪ್ರಾಂಗಣದಲ್ಲಿ ಅದ್ದೂರಿ ಅಲಂಕಾರ ಮಾಡಿಕೊಂಡು ಮಾಜಿ ಕಾರ್ಪೊರೇಟರೊಬ್ಬರ ಮಗಳ ಮದುವೆಯನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ದೇವಳ ಹೊರಾಂಗಣದಲ್ಲಿ 50ಕ್ಕೂ ಅಧಿಕ ಕಾರುಗಳು ಸಾಲುಗಟ್ಟಿ ನಿಂತಿದ್ದವು. ಮದುವೆ ಸಭಾಂಗಣದಲ್ಲಿ ಮ್ಯೂಸಿಕ್ ಕೂಡಾ ಹಾಕಲಾಗಿತ್ತು.
ಲಾಕ್ಡೌನ್ ಅವಧಿಯಲ್ಲಿ ಆಯೋಜಿಸಲಾದ ನೂರಾರು ಮದುವೆಯನ್ನು ಮುಂದೂಡಲಾಗಿದೆ. ಅದರ ಮಧ್ಯೆಯೂ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಮದುವೆ ಆಯೋಜಿಸಿರುವುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಎಸಿ ಮದನ್ ಮೋಹನ್: ಮದುವೆ ಆಯೋಜನೆ ಬಗ್ಗೆ ಮಾಹಿತಿ ಪಡೆದ ಉಪವಿಭಾಗ ಅಧಿಕಾರಿ ಮದನ್ ಮೋಹನ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಲಾಕ್ಡೌನ್ ಉಲ್ಲಂಘನೆ ಮಾಡಿ ಅದ್ದೂರಿ ಮದುವೆ ಆಯೋಜಿಸಿರುವುದು ಕಂಡು ಬಂದಿದೆ. ಈ ಕಾರಣದಿಂದ ದೇವಸ್ಥಾನದ ಆಡಳಿತ ಮೊಕ್ತೇಸರ, ಸಿಬ್ಬಂದಿ ಹಾಗೂ ಮದುವೆ ಆಯೋಜಕರನ್ನು ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಎಸಿ ಮದನ್ ಮೋಹನ್ ಮಾತನಾಡಿ, ‘ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ ಮದುವೆ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಧಾರ್ಮಿಕ ಇಲಾಖೆಯ ಸಹಾಯ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಗಂಭೀರತೆಯ ಮೇಲೆ ಪ್ರಕರಣ ದಾಖಲಿಸಲಾಗವುದು’ ಎಂದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ