ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉಪವಿಭಾಗ ಅಧಿಕಾರಿ ಮದನ್ ಮೋಹನ್ ನೇತೃತ್ವದ ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ದಿನದಿಂದ ಮಂಗಳಾದೇವಿ ದೇವಸ್ಥಾನದ ಪ್ರವೇಶ ದ್ವಾರಕ್ಕೆ ಗೇಟ್ ಹಾಕಿ ಭಕ್ತರಿಗೆ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ದೇವಸ್ಥಾನದ ಪ್ರಾಂಗಣದಲ್ಲಿ ಅದ್ದೂರಿ ಅಲಂಕಾರ ಮಾಡಿಕೊಂಡು ಮಾಜಿ ಕಾರ್ಪೊರೇಟರೊಬ್ಬರ ಮಗಳ ಮದುವೆಯನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ದೇವಳ ಹೊರಾಂಗಣದಲ್ಲಿ 50ಕ್ಕೂ ಅಧಿಕ ಕಾರುಗಳು ಸಾಲುಗಟ್ಟಿ ನಿಂತಿದ್ದವು. ಮದುವೆ ಸಭಾಂಗಣದಲ್ಲಿ ಮ್ಯೂಸಿಕ್ ಕೂಡಾ ಹಾಕಲಾಗಿತ್ತು.
ಲಾಕ್ಡೌನ್ ಅವಧಿಯಲ್ಲಿ ಆಯೋಜಿಸಲಾದ ನೂರಾರು ಮದುವೆಯನ್ನು ಮುಂದೂಡಲಾಗಿದೆ. ಅದರ ಮಧ್ಯೆಯೂ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಮದುವೆ ಆಯೋಜಿಸಿರುವುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಎಸಿ ಮದನ್ ಮೋಹನ್: ಮದುವೆ ಆಯೋಜನೆ ಬಗ್ಗೆ ಮಾಹಿತಿ ಪಡೆದ ಉಪವಿಭಾಗ ಅಧಿಕಾರಿ ಮದನ್ ಮೋಹನ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಲಾಕ್ಡೌನ್ ಉಲ್ಲಂಘನೆ ಮಾಡಿ ಅದ್ದೂರಿ ಮದುವೆ ಆಯೋಜಿಸಿರುವುದು ಕಂಡು ಬಂದಿದೆ. ಈ ಕಾರಣದಿಂದ ದೇವಸ್ಥಾನದ ಆಡಳಿತ ಮೊಕ್ತೇಸರ, ಸಿಬ್ಬಂದಿ ಹಾಗೂ ಮದುವೆ ಆಯೋಜಕರನ್ನು ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಎಸಿ ಮದನ್ ಮೋಹನ್ ಮಾತನಾಡಿ, ‘ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ ಮದುವೆ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಧಾರ್ಮಿಕ ಇಲಾಖೆಯ ಸಹಾಯ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಗಂಭೀರತೆಯ ಮೇಲೆ ಪ್ರಕರಣ ದಾಖಲಿಸಲಾಗವುದು’ ಎಂದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ