ಮಡಿಕೇರಿ ಜೂನ್ 23: ಕೋವಿಡ್ 19 ರ ಸಮಸ್ಯೆಯಿಂದಾಗಿ ಶಾಲಾ,ಕಾಲೇಜು ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ವಿಭಾಗವು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಕೊಡಗಿನ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಶ್ರೀ ಅಪ್ಪಚ್ಚು ರಂಜನ್ ರವರ ಮೂಲಕ ಶಿಕ್ಷಣ ಸಚಿವರಿಗೆ ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಆನ್ಲೈನ್ ತರಗತಿಯ ಹೆಸರಿನಲ್ಲಿ ಶುಲ್ಕ ಮತ್ತು ಡೊನೇಶನ್ ರೂಪದಲ್ಲಿ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳು ತೊಂದರೆ ನೀಡುತ್ತಿರುವ ಮತ್ತು “ಅರಿವು ಲೋನ್” ಮಂಜೂರು, ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಗೊಂದಲ, NCAHP-21 ಬಿಲ್ ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ವಿಚಾರಗಳನ್ನು ಉಲ್ಲೇಖಿಸಿ ಮನವಿ ನೀಡಲಾಗಿದೆ.
ಈ ಕುರಿತು ಮಾತನಾಡಿದ ಶಾಸಕರು ಈ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಎಸ್ಎಫ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆ ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ ಹೊಸತೋಟದ ಉನೈಸ್ ಶಿಹಾಬ್ ತಂಙ್ಞಳ್ ಸಲೀಂ ಮುಂತಾದ ನಾಯಕರು ಭಾಗಿಯಾಗಿದ್ದರು.
ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಶಾಸಕರುಗಳ ಮುಖಾಂತರ ಶಿಕ್ಷಣ ಸಚಿವರಿಗೆ ಎಸ್ಸೆಸ್ಸೆಫ್ನಿಂದ ಇದೇ ರೀತಿ ಮನವಿ ಸಲ್ಲಿಸಲಾಗುತ್ತಿದ್ದು ನಾಳೆ ವಿರಾಜಪೇಟೆ ಕ್ಷೇತ್ರ ಶಾಸಕರಾದ ಕೆ.ಜಿ ಬೋಪಯ್ಯನವರಿಗೂ ಮನವಿ ಸಲ್ಲಿಸಲಾಗುವುದು ಎಂದು ಎಸ್ಎಸ್ಎಫ್ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ನೆಲ್ಯಾಹುದಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ