ಬೆಳಂದೂರು ನೂರುಲ್ ಹುದಾ ಮದರಸ ವಿದ್ಯಾರ್ಥಿಗಳಿಗೆ ATC ಅಬ್ದುಲ್ ಕರೀಂ ಹಾಜಿ ಕಾಣಿಯೂರು ಹಾಗೂ ಮಾಮು ಬೆಳಂದೂರು ರವರು ಸೇರಿ ಮದರಸ ವಿದ್ಯಾರ್ಥಿಗಳಿಗೆ 9000 ಸಾವಿರ ರೂಪಾಯಿ ಖರ್ಚಿನಿಂದ ಉಚಿತ ಪಾಠ ಪುಸ್ತಕ ವಿತರಣೆ ಕಾರ್ಯಕ್ರಮ ದಿನಾಂಕ 23/06/2021 ಬುಧವಾರ ನೂರುಲ್ ಹುದಾ ಮದರಸ ಹಾಳಿನಲ್ಲಿ ನಡೆಯಿತು.
ತಖ್ವಾ ಮಸೀದಿ ಇಮಾಮ್ ಅಬ್ದುಲ್ ಹಮೀದ್ ಸಖಾಫಿಯವರು ಸ್ವಾಗತ ಮಾಡಿದ ಕಾರ್ಯಕ್ರಮದ ಉದ್ಘಾಟನೆಯನ್ನು ಯುಸುಫ್ ಸಖಾಫಿ ಬೆಳಂದೂರು ನೆರವೆರಿಸದರು.
ಅಬ್ದುಲ್ ಕರೀಂ ಹಾಜಿಯವರು ಉಚಿತ ಪಾಠ ಪುಸ್ತಕ ವಿತರಣೆಗೆ ಚಾಲನೆ ನೀಡಿದರು. ತಖ್ವಾ ಮಸೀದಿ ಆಡಳಿತ ಮಂಡಳಿ ನೇತಾರರಾದ ಮಾಮು ಬೆಳಂದೂರು,ಯುವ ಉದ್ಯಮಿ. ಹಾಗೂ ತಖ್ವಾ ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಬೆಳಂದೂರು,ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ನಡುಗುಡ್ಡೆ,ಉಸ್ಮಾನ್ ಸುರುಳಿ ಮಜಲು,ಮುಹಮ್ಮದ್ ಇಟ್ಟಿಯಡ್ಕ,ಅಬ್ಬಾಸ್ ಕಲ್ಪಡ,ಮುಂತಾದ ಹಲವು ನಾಯಕರು ವಿದ್ಯಾರ್ಥಿಗಳಿಗೆ ಪಾಠ ಪುಸ್ತಕ ವಿತರಣೆ ಮಾಡಿದರು.
ಅಬ್ದುಲ್ ಕರೀಂ ಹಾಜಿ ಹಾಗೂ ಮಾಮು ಬೆಳಂದೂರು ರವರ ಮರಣ ಹೊಂದಿದ ತಾಯಿಯ ಹೆಸರಿನಲ್ಲಿ ದಾನವಾಗಿ ನೀಡಿದ ಮದರಸ ವಿದ್ಯಾರ್ಥಿಗಳ ಉಚಿತ ಪಾಠ ಪುಸ್ತಕ ವಿತರಣೆಯ ನಂತರ ಅವರ ಹೆಸರಿನಲ್ಲಿ ತಹ್ಲೀಲ್ ಹಾಗೂ ದುಆ ಮಜ್ಲಿಸಿಗೆ ಯುಸುಫ್ ಸಖಾಫಿ ನೇತೃತ್ವ ನೀಡಿದರು.
ಕಳೆದ ನಾಲ್ಕು ವರ್ಷಗಳ ಹಿಂದೆ ಊರಿನವರ ಸಹಾಯ ಸಹಕಾರದಿಂದ ನಿರ್ಮಾಣವಾದ ನೂರುಲ್ ಹುದಾ ಮದರಸ 7 ವಿದ್ಯಾರ್ಥಿಗಳಿಂದ ಆರಂಭಗೊಂಡ ಮದರಸ ಇದೀಗ ಸುಮಾರು 36 ವಿದ್ಯಾರ್ಥಿಗಳನ್ನು ಒಳಗೊಂಡು ಉತ್ತಮವಾದ ರೀತಿಯಲ್ಲಿ ಕಾರ್ಯಾಚರಿಸುತ್ತಿದೆ.
ವರದಿ:
ಅಬ್ದುಲ್ ಲತೀಫ್ ಮಿಸ್ಬಾಹಿ
ಬೆಳಂದೂರು
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ