ಬೆಂಗಳೂರು,ಜೂ.25: ಮಾದಕ ವಿರುದ್ಧ ದಿನದ ಅಂಗವಾಗಿ ವಿದ್ಯಾರ್ಥಿ-ಯುವ ಸಮೂಹದ ಭವಿಷ್ಯಕ್ಕೆ ಮಾರಕವಾಗಿರುವ, ಕೌಟುಂಬಿಕ ಕಲಹಗಳಿಗೂ ವಿಘಟನೆಗೂ ಕಾರಣವಾಗಿರುವ ಮದ್ಯ-ಮಾದಕದ ವಿರುದ್ಧ ಎಸ್ಸೆಸ್ಸೆಫ್ ರಾಜ್ಯದಾದ್ಯಂತ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ.
ಕೊರೋನಾ ಕಾಲದಲ್ಲಿ ನೇರವಾಗಿ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗದಿದ್ದರೂ ಯುವ ಪೀಳಿಗೆ ನೆಚ್ಚಿನ ಸಾಮಾಜಿಕ ಜಾಲ ತಾಣಗಳಲ್ಲಿ ಉಪನ್ಯಾಸ, ಲೇಖನ, ವಿವಿಧ ಸ್ಪರ್ಧೆಗಳ ಮುಖಾಂತರ ಜಾಗೃತಿ ಮೂಡಿಸುವುದುರೊಂದಿಗೆ ಮದ್ಯ ಮಾದಕ ವಸ್ತುಗಳ ವಿರುದ್ಧ ನಿಲುವನ್ನು ಕೈಗೊಳ್ಳಲು ಸರ್ಕಾರವನ್ನು ಆಗ್ರಹಿಸುತ್ತಿದೆ.
ಅದಕ್ಕೆ ಪೂರಕವಾದ ಯೋಜನೆಗಳನ್ನು ರಾಜ್ಯ ಕ್ಯಾಂಪಸ್ ವಿಭಾಗವು ಈಗಾಗಲೇ ಸುತ್ತೋಲೆ ಕಳುಹಿಸಲಾಗಿ ರಾಜ್ಯದಾದ್ಯಂತ ಎಲ್ಲ ಘಟಕಗಳೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಕ್ರಿಯವಾಗಿ ಅಭಿಯಾನದಲ್ಲಿ ನಿರತವಾಗಿದೆ. ಈ ಅಭಿಯಾನವನ್ನು ಸರ್ವರೂ ಬೆಂಬಲಿಸಿ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಹೊಸತೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ