ನವದೆಹಲಿ:ದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆಗಳನ್ನು ಪುನರಾರಂಭಿಸುವಂತೆ ಭಾರತ, ವಿವಿಧ ದೇಶಗಳ ಮನವೊಲಿಕೆಗೆ ಮುಂದಾಗಿದೆ. ಪ್ರಯಾಣ ನಿಷೇಧವನ್ನು ತೆಗೆದುಹಾಕಲು ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸಿ, ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಚರ್ಚೆಗೆ ಮುಂದಾಗಿದೆ.ಕೋವಿಡ್ ಎರಡನೇ ತರಂಗದ ಹಿನ್ನೆಲೆಯಲ್ಲಿ ಅನೇಕ ದೇಶಗಳು ಭಾರತದ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿವೆ.ಏಪ್ರಿಲ್ನಲ್ಲಿ ಏರ್ಪಡಿಸಿದ್ದ ನಿಷೇಧವು ಅನಿರ್ದಿಷ್ಟವಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಮಧ್ಯಪ್ರವೇಶಿಸಿದೆ.
ಭಾರತವು ಗಲ್ಫ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ಏರ್ ಬಬಲ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ.ದಿನಕ್ಕೆ ನಾಲ್ಕು ಲಕ್ಷಕ್ಕೂ ಅಧಿಕವಾಗಿದ್ದ ಕೋವಿಡ್ ರೋಗಿಗಳ ಸಂಖ್ಯೆ ಈಗ ಅರ್ಧ ಲಕ್ಷಕ್ಕಿಂತ ಕಡಿಮೆಯಾಗಿದೆ. ಲಸಿಕೆ ಹಾಕಿದವರಿಗೆ ಪ್ರಯಾಣಿಸಲು ಅನುಮತಿ ನೀಡುವ ಯುರೋಪಿಯನ್ ರಾಷ್ಟ್ರಗಳ ಕ್ರಮದಿಂದ ಭಾರತವೂ ಪ್ರೇರಿತವಾಗಿದೆ.
ಪ್ರಯಾಣವನ್ನು ಪುನರಾರಂಭಿಸಲು ಸರ್ಕಾರ ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಮುಂದುವರಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಕ್ಷಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ