ಯುಎಇಗೆ ಭಾರತೀಯರ ಪ್ರವೇಶ ನಿಷೇಧ ಜುಲೈ 21 ರವರೆಗೆ ಮುಂದುವರಿಯುತ್ತದೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಟ್ರಾವೆಲ್ ಏಜೆನ್ಸಿಗಳು ಹೇಳುತ್ತಾರೆ.
ಪ್ರಯಾಣಿಕರ ಪ್ರೋಟೋಕಾಲ್ ನಲ್ಲಿ ಸ್ಪಷ್ಟತೆ ಲಭ್ಯವಾದಲ್ಲಿ, ಯಾವುದೇ ಸಮಯದಲ್ಲಿ ಭಾರತದಿಂದ ಸೇವೆಗಳನ್ನು ಪುನರಾರಂಭಿಸುವುದಾಗಿ ವಿಮಾನಯಾನ ಸಂಸ್ಥೆಗಳು ತಿಳಿಸಿವೆ.
ಪ್ರಯಾಣ ನಿಷೇಧಕ್ಕೆ ಸಂಬಂಧಿಸಿದಂತೆ ವಿಮಾನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ಪ್ರಾಧಿಕಾರ ನೀಡಿದ ನೋಟಿಸ್ನಿಂದಾಗಿ ಈ ತಪ್ಪು ಕಲ್ಪನೆ ಉಂಟಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ನೀಡಿರುವ ನೋಟಿಸ್ ಪ್ರಕಾರ, ಭಾರತ ಸೇರಿದಂತೆ 13 ದೇಶಗಳಿಗೆ ಜುಲೈ 21 ರವರೆಗೆ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿದೆ.ಆದಾಗ್ಯೂ,ವಿಮಾನಯಾನ ಅಧಿಕಾರಿಗಳು ವಿಮಾನಯಾನ ಸಂಸ್ಥೆಗಳಿಗೆ ನೀಡುವ ಸಾಮಾನ್ಯ ಸೂಚನೆಯಾಗಿದೆ ಇದು.
ನಿರ್ಬಂಧಗಳು ಕೊನೆಗೊಳ್ಳುವ ಸಂಭವನೀಯ ದಿನಾಂಕವನ್ನು ನೋಟಿಸ್ನಲ್ಲಿ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಜುಲೈ 21 ರ ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ದಿನದ ಮೊದಲು ಅಥವಾ ನಂತರ ನಿರ್ಬಂಧಗಳನ್ನು ತೆಗೆದುಹಾಕಬಹುದು.
ಕೆಟ್ಟ ಹವಾಮಾನ, ರನ್ವೇ ರಿಪೇರಿ ಮತ್ತು ವಿಪತ್ತುಗಳ ಸಂದರ್ಭಗಳಲ್ಲಿ ಈ ರೀತಿ ದಿನಾಂಕವನ್ನು ನಿಗದಿ ಪಡಿಸಿದ ಸೂಚನೆಗಳನ್ನು ನೀಡಲಾಗುತ್ತದೆ. ಆದರೆ,ನಿಗದಿತ ದಿನಾಂಕದ ಮುಂಚಿತವಾಗಿ ನಿರ್ಬಂಧಗಳನ್ನು ತೆರವುಗೊಳಿಸುವುದು ಸಾಮಾನ್ಯ. ಸಾಧ್ಯವಾದಷ್ಟು ಬೇಗ ನಿಷೇಧವನ್ನು ತೆಗೆದುಹಾಕಲು ಯುಎಇ ಸರ್ಕಾರ ಮುಂದಾಗಿದೆ.
ಎಮಿರೇಟ್ಸ್, ಇತ್ತಿಹಾದ್ ಮತ್ತು ಏರ್ ಇಂಡಿಯಾ ಜುಲೈ 6 ರವರೆಗೆ ಪ್ರಯಾಣ ನಿಷೇಧವನ್ನು ಘೋಷಿಸಿವೆ. ಜುಲೈ 7 ರಿಂದ ಸೇವೆ ಪುನರಾರಂಭಿಸುವುದಾಗಿ ಎಮಿರೇಟ್ಸ್ ಪ್ರಕಟಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ