ಯುಎಇಗೆ ಭಾರತೀಯರ ಪ್ರವೇಶ ನಿಷೇಧ ಜುಲೈ 21 ರವರೆಗೆ ಮುಂದುವರಿಯುತ್ತದೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಟ್ರಾವೆಲ್ ಏಜೆನ್ಸಿಗಳು ಹೇಳುತ್ತಾರೆ.
ಪ್ರಯಾಣಿಕರ ಪ್ರೋಟೋಕಾಲ್ ನಲ್ಲಿ ಸ್ಪಷ್ಟತೆ ಲಭ್ಯವಾದಲ್ಲಿ, ಯಾವುದೇ ಸಮಯದಲ್ಲಿ ಭಾರತದಿಂದ ಸೇವೆಗಳನ್ನು ಪುನರಾರಂಭಿಸುವುದಾಗಿ ವಿಮಾನಯಾನ ಸಂಸ್ಥೆಗಳು ತಿಳಿಸಿವೆ.
ಪ್ರಯಾಣ ನಿಷೇಧಕ್ಕೆ ಸಂಬಂಧಿಸಿದಂತೆ ವಿಮಾನಯಾನ ಸಂಸ್ಥೆಗಳಿಗೆ ನಾಗರಿಕ ವಿಮಾನಯಾನ ಪ್ರಾಧಿಕಾರ ನೀಡಿದ ನೋಟಿಸ್ನಿಂದಾಗಿ ಈ ತಪ್ಪು ಕಲ್ಪನೆ ಉಂಟಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ನೀಡಿರುವ ನೋಟಿಸ್ ಪ್ರಕಾರ, ಭಾರತ ಸೇರಿದಂತೆ 13 ದೇಶಗಳಿಗೆ ಜುಲೈ 21 ರವರೆಗೆ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿದೆ.ಆದಾಗ್ಯೂ,ವಿಮಾನಯಾನ ಅಧಿಕಾರಿಗಳು ವಿಮಾನಯಾನ ಸಂಸ್ಥೆಗಳಿಗೆ ನೀಡುವ ಸಾಮಾನ್ಯ ಸೂಚನೆಯಾಗಿದೆ ಇದು.
ನಿರ್ಬಂಧಗಳು ಕೊನೆಗೊಳ್ಳುವ ಸಂಭವನೀಯ ದಿನಾಂಕವನ್ನು ನೋಟಿಸ್ನಲ್ಲಿ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಜುಲೈ 21 ರ ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ದಿನದ ಮೊದಲು ಅಥವಾ ನಂತರ ನಿರ್ಬಂಧಗಳನ್ನು ತೆಗೆದುಹಾಕಬಹುದು.
ಕೆಟ್ಟ ಹವಾಮಾನ, ರನ್ವೇ ರಿಪೇರಿ ಮತ್ತು ವಿಪತ್ತುಗಳ ಸಂದರ್ಭಗಳಲ್ಲಿ ಈ ರೀತಿ ದಿನಾಂಕವನ್ನು ನಿಗದಿ ಪಡಿಸಿದ ಸೂಚನೆಗಳನ್ನು ನೀಡಲಾಗುತ್ತದೆ. ಆದರೆ,ನಿಗದಿತ ದಿನಾಂಕದ ಮುಂಚಿತವಾಗಿ ನಿರ್ಬಂಧಗಳನ್ನು ತೆರವುಗೊಳಿಸುವುದು ಸಾಮಾನ್ಯ. ಸಾಧ್ಯವಾದಷ್ಟು ಬೇಗ ನಿಷೇಧವನ್ನು ತೆಗೆದುಹಾಕಲು ಯುಎಇ ಸರ್ಕಾರ ಮುಂದಾಗಿದೆ.
ಎಮಿರೇಟ್ಸ್, ಇತ್ತಿಹಾದ್ ಮತ್ತು ಏರ್ ಇಂಡಿಯಾ ಜುಲೈ 6 ರವರೆಗೆ ಪ್ರಯಾಣ ನಿಷೇಧವನ್ನು ಘೋಷಿಸಿವೆ. ಜುಲೈ 7 ರಿಂದ ಸೇವೆ ಪುನರಾರಂಭಿಸುವುದಾಗಿ ಎಮಿರೇಟ್ಸ್ ಪ್ರಕಟಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ