ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನವನ್ನು ಜು.31ರವರೆಗೆ ನಿರ್ಬಂಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(DGCA) ಆದೇಶ ಹೊರಡಿಸಿದೆ. ಈ ಹಿಂದೆ ವಿಧಿಸಿದ್ದ ನಿರ್ಬಂಧ ಇಂದಿಗೆ (ಜೂ.30) ಮುಕ್ತಾಯಗೊಳ್ಳಬೇಕಿತ್ತು. ಆದರೆ ಕೊರೊನಾ 3ನೇ ಅಲೆ ಭೀತಿ, ಡೆಲ್ಟಾ ಪ್ಲಸ್ ಭೀತಿ ದೇಶದ ಮೇಲಿದ್ದು, ಭಾರತ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.
ಸರಕು ಸಾಗಾಟ ವಿಮಾನ ಹಾಗೂ ಆಯ್ದ ದೇಶಗಳ ಜೊತೆಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಹಾರಾಟ ನಡೆಸುತ್ತಿರುವ ವಿಮಾನಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಡಿಜಿಸಿಎಂ ತಿಳಿಸಿದೆ. ಕೊರೊನಾ ಸಾಂಕ್ರಾಮಿಕ ರೋಗ ಬಾಧಿಸಲು ಶುರುವಾದಗಿನಿಂದ ಅಂದರೆ 2020ರ ಮಾರ್ಚ್ ತಿಂಗಳಿನಿಂದ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಯಾನದ ಮೇಲೆ ನಿರ್ಬಂಧವೇರಲಾಗಿದೆ. 15 ತಿಂಗಳಗಳ ಬ್ಯಾನ್ ಇಂದಿಗೆ ಮುಕ್ತಾಯವಾಗಬೇಕಿತ್ತು. ಕೊರೊನಾ ಕರಿನೆರಳು ಸರಿಯದ ಹಿನ್ನೆಲೆಯಲ್ಲಿ ಇನ್ನೂ ಒಂದು ತಿಂಗಳ ನಿರ್ಬಂಧವನ್ನು ಮುಂದುವರಿಸಲಾಗುತ್ತಿದೆ.
ಆಯ್ದ ಕೆಲ ದೇಶಗಳನ್ನು ಹೊರತುಪಡಿಸಿ ಉಳಿದ ರಾಷ್ಟ್ರಗಳಿಗೆ ಇನ್ನೂ ಒಂದು ತಿಂಗಳ ವಿಮಾನಗಳು ಹಾರಾಡಲ್ಲ. ಈ ಮೂಲಕ ಅಂತಾರಾಷ್ಟ್ರೀಯ ಸಂಪರ್ಕ ಇನ್ನೂ ಕೊರೊನಾ ಭಯದಲ್ಲೇ ಇದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ