ಬೆಂಗಳೂರು,ಜು. 1: ಕೇರಳ ರಾಜ್ಯದಲ್ಲಿ ಡೆಲ್ಟಾ ಸೋಂಕಿನ ಭೀತಿ ಎದುರಾಗಿರುವ ಹಿನ್ನಲೆ ಇನ್ಮುಂದೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ನೆರೆಯ ರಾಜ್ಯದಿಂದ ಆಗಮಿಸುವವರು ಆರ್ಟಿಪಿಸಿಆರ್ ನೆಗಟಿವ್ ವರದಿ ಅಥವಾ ಕೋವಿಡ್ ವಾಕ್ಸಿನೇಷನ್ ಪ್ರಮಾಣ ಪತ್ರವನ್ನು ತೋರಿಸಿಯೇ ಕರ್ನಾಟಕಕ್ಕೆ ಬರಬೇಕು ಎಂದು ಸೂಚನೆ ನೀಡಲಾಗಿದೆ.
ಇಷ್ಟು ದಿನ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಮಿಸುವವರಿಗೆ ಈ ನಿರ್ಬಂಧ ವಿಧಿಸಲಾಗಿತ್ತು. ಈಗ ಕೇರಳದಲ್ಲೂ ಡೆಲ್ಟಾ ಸೋಂಕಿನ ಭೀತಿ ಮೂಡಿರುವ ಹಿನ್ನಲೆ ಈ ಕ್ರಮ ಅನಿವಾರ್ಯವಾಗಿದೆ ಎಂದು ಸರ್ಕಾರ ತಿಳಿಸಿದೆ. ಟಾಕ್ಸಿ, ಸಾರಿಗೆ, ಸ್ವಂತ ವಾಹನ ಅಥವಾ ರೈಲು ಮತ್ತು ವಿಮಾನದ ಮೂಲಕ ಬರುವವರು 72 ಗಂಟೆ ಮುಂಚಿತವಾಗಿ ಪರೀಕ್ಷೆಗೆ ಒಳಪಟ್ಟು ನೆಗಟಿವ್ ವರದಿ ತರಬೇಕಿರುವುದು ಕಡ್ಡಾಯವಾಗಿದೆ
ಕೇರಳ ಮತ್ತು ಕರ್ನಾಟಕದ ವಿಮಾನ ಸಂಚಾರ ನಡೆಸುವವರು ಕೂಡ 72 ಗಂಟೆ ಮುಂಚಿತವಾಗಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟಿರಬೇಕು. ಅವರ ವರದಿ ನೆಗಟಿವ್ ಇದ್ದರೆ ಮಾತ್ರ ವಿಮಾನ ಸಂಸ್ಥೆಗಳು ಬೋರ್ಡಿಂಗ್ ಪಾಸ್ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ. ರೈಲಿನಲ್ಲಿ ಪ್ರವೇಶಿಸುವ ಕೇರಳ ಪ್ರವಾಸಿಗರ ಮಾಹಿತಿಯನ್ನು ರೈಲ್ವೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಬಸ್ನಲ್ಲಿ ಕಂಡಕ್ಟರ್ಗಳು ಈ ಕುರಿತು ಕೂಲಂಕುಷ ಪರಿಶೀಲನೆ ನಡೆಸಬೇಕು.
ಇಷ್ಟೇ ಅಲ್ಲದೇ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಗಡಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಕಟ್ಟೆಚ್ಚರವಹಿಸಬೇಕು. ರಾಜ್ಯಕ್ಕೆ ಪ್ರವೇಶಿಸುವ ಕೇರಳದ ಎಲ್ಲರು ತಪಾಸಣೆಗೆ ಒಳಪಡಿಸುವ ಅಗತ್ಯ ಇದೆ. ಅಲ್ಲದೇ, ಚೆಕ್ಪೋಸ್ಟ್ ನಿರ್ಮಿಸಬೇಕು ಎಂದು ಸೂಚನೆ ನೀಡಲಾಗಿದೆ.
ಶಿಕ್ಷಣ, ವ್ಯವಹಾರ ಮತ್ತು ಇತರ ಉದ್ದೇಶಗಳಿಗಾಗಿ ಕರ್ನಾಟಕಕ್ಕೆ ಭೇಟಿ ನೀಡುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆಗೆ ನೆಗೆಟಿವ್ ರಿಪೋರ್ಟ್ ನೀಡಿದರೆ ಸಾಕು. ಎರಡು ಡೋಸ್ ಲಸಿಕೆ ಪಡೆದಿದ್ದರೇ ಟೆಸ್ಟ್ ಬೇಕಿಲ್ಲ. ಕೆಲವು ತುರ್ತು ಸಂದರ್ಭದಲ್ಲಿ ಟೆಸ್ಟ್ ಕಡ್ಡಾಯವಲ್ಲ. ಎರಡು ವರ್ಷದ ಒಳಗಿನ ಮಕ್ಕಳಿಗೆ ಟೆಸ್ಟ್ ಕಡ್ಡಾಯವಲ್ಲ.
ಯಾವುದೇ ವ್ಯಕ್ತಿಯು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020, ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಐಪಿಸಿಯ ಇತರ ಸಂಬಂಧಿತ ವಿಭಾಗಗಳ ಪ್ರಕಾರ ಅಗತ್ಯ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ