ಮುಂಬಯಿ: ತಾವು ಯೆಮನ್ನಲ್ಲಿ ಜನಿಸಿದ್ದು ಎಂಬ ಗುಟ್ಟನ್ನು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಬಹಿರಂಗ ಪಡಿಸಿದ್ದಾರೆ. ಈ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳ ಜತೆಗಿನ ತಮ್ಮ ಸಂಬಂಧಕ್ಕೆ ಐತಿಹಾಸಿಕ ನಂಟು ಇದೆ ಎಂದು ಹೇಳಿಕೊಂಡಿದ್ದಾರೆ.
ಕತಾರ್ ಎಕನಾಮಿಕ್ ಫೋರಂನ ಸಂವಾದದಲ್ಲಿ ಮಾತನಾಡಿದ ಮುಕೇಶ್, “ನಿನ್ನ ಮೈಯಲ್ಲಿಅರೇಬಿಕ್ ರಕ್ತ ಹರಿಯುತ್ತಿದೆ ಎಂದು ನನ್ನ ತಂದೆ ಹೇಳುತ್ತಿದ್ದರು. ನಾನು ಜನಿಸಿದ್ದು ಯೆಮನ್ನಲ್ಲಿ. ಬಹುಶಃ ನನ್ನ ಹೆತ್ತವರು ಇಲ್ಲಿಗೆ ಪ್ರವಾಸ ಬಂದಿದ್ದಾಗ ನಾನು ಜನಿಸಿರಬಹುದು” ಎಂದು ಹೇಳಿದ್ದಾರೆ.
“ನನ್ನ ಕುಟುಂಬ ಕತಾರ್ ಜತೆ ಉತ್ತಮ ಬಾಂಧವ್ಯ ಹೊಂದಿದೆ. ಕತಾರ್ ರಾಜಮನೆತನದ ಬಗ್ಗೆ ನಮಗೆ ಹೆಮ್ಮೆ ಇದೆ. ಕ್ರೀಡೆ ಹಾಗೂ ಸಂಸ್ಕೃತಿಯಲ್ಲಿ ಕತಾರ್ ಮಾಡಿದ ಸಾಧನೆಗೆ ನನ್ನ ಪತ್ನಿ ಅಭಿಮಾನಿಯೇ ಆಗಿದ್ದಾಳೆ. ನನ್ನ ಮಗಳು ಸಹ ಕತಾರ್ ಫೌಂಡೇಷನ್ ಸಾಧನೆ ಬಗ್ಗೆ ಅಭಿಮಾನ ಇಟ್ಟುಕೊಂಡಿದ್ದಾಳೆ. ನಮ್ಮ ಇಡೀ ಕುಟುಂಬವೇ ಕತಾರ್ ಫೌಂಡೇಷನ್ ಹಾಗೂ ರಾಜಮನೆತನದ ಬಗ್ಗೆ ಹೆಮ್ಮೆಪಡುತ್ತದೆ” ಎಂದು ತಿಳಿಸಿದ್ದಾರೆ.
“ಅಷ್ಟೇ ಅಲ್ಲ, ಅರೇಬಿಕ್ ದೇಶಗಳ ಜತೆ ಭಾರತದ ಸಂಬಂಧ ಶತಮಾನಗಳಿಂದಲೂ ಉತ್ತಮವಾಗಿದೆ.
ಕತಾರ್ನಲ್ಲಿಯೇ ಸುಮಾರು ಏಳು ಲಕ್ಷ ಭಾರತೀಯರು ಇದ್ದಾರೆ. ಅವರೆಲ್ಲರೂ ಭಾರತಕ್ಕೆ ಕತಾರ್ ವಕ್ತಾರರಿದ್ದಂತೆ” ಎಂದು ತಿಳಿಸಿದ್ದಾರೆ.
ಡಿಜಿಟಲ್ ಪ್ರಾಮುಖ್ಯ ಕುರಿತು ಮಾತನಾಡಿದ ರಿಲಯನ್ಸ್ ಮುಖ್ಯಸ್ಥ, ”ಮನುಷ್ಯನಿಗೆ ಆಹಾರ, ಬಟ್ಟೆ, ವಸತಿಯಂತೆಯೇ ಸಂಪರ್ಕ ಹಾಗೂ ಸಂವಹನವೂ ಮೂಲಭೂತ ಅವಶ್ಯಕತೆಗಳಾಗಿವೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಡಿಜಿಟಲ್ ಮೂಲಸೌಕರ್ಯದ ಮಹತ್ವದ ಮನವರಿಕೆಯಾಗಿದೆ,” ಎಂದು ಹೇಳಿದ್ದಾರೆ
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ