ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ SჄS.SSF.KCF ಕಾರ್ಯಕರ್ತರನ್ನೊಳಗೊಂಡ ತುರ್ತು ಸೇವಾ ತಂಡ “ಸಹಾಯ್” ವತಿಯಿಂದ ರಾಜ್ಯಾದ್ಯಂತ ನಡೆಯುವ ನಿರ್ಮಲ ಮನಸ್ಸು ನೈರ್ಮಲ್ಯ ಪರಿಸರ” ಸಹಾಯ್ ಸ್ವಚ್ಛತಾ ಅಭಿಯಾನದ ಅಂಗವಾಗಿ. ಸಹಾಯ್ ತುರ್ತು ಸೇವಾ ತಂಡ ವಿಟ್ಲ ಸರ್ಕಲ್ ವತಿಯಿಂದ. ಡ್ಯೆರೆಕ್ಟರ್
ಇಸ್ಮಾಯಲ್ ಮಾಸ್ಟರ್ ಮಂಗಿಲಪದವು ಅವರ ನೇತೃತ್ವದಲ್ಲಿ ವಿಟ್ಲ ಸರ್ಕಲ್ ವ್ಯಾಪ್ತಿಯ ಸ್ವಚ್ಛತಾ ಅಭಿಯಾನದ ಉದ್ಘಾಟನೆ ನಡೆಯಿತು.

ವಿಟ್ಲ ನಾಡಕಚೇರಿ ಪೊಲೀಸ್ ಠಾಣೆ ಗ್ರಾಮಕರಣಿಕರ ಕಚೇರಿ ಸಬ್ ರಿಜಿಸ್ಟರ್ ಕಚೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಧಾರ್ಮಿಕ ಕೇಂದ್ರಗಳು ಸೇರಿದಂತೆ ವಿಟ್ಲ ಪಟ್ಟಣ ಪರಿಸರದಲ್ಲಿ. ಶುಚೀಕರಣ ಮಾಡುವ ಮೂಲಕ. ನಿರ್ಮಲ ಮನಸ್ಸು ನೈರ್ಮಲ್ಯ ಪರಿಸರ” ಸಹಾಯ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸ್ವಚ್ಛತಾ ಕಾರ್ಯಕ್ರಮವನ್ನು ಸಾರ್ವಜನಿಕರು ವರ್ತಕರು ಹಾಗೂ ಅಧಿಕಾರಿಗಳು ತುಂಬು ಹೃದಯದಿಂದ ಪ್ರಶಂಸಿಸಿದರು, ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡಕ್ಕೆ ವಿಟ್ಲ ಸಬ್ ರಿಜಿಸ್ಟರ್ ಕಚೇರಿ ಅಧಿಕಾರಿಗಳಾದ ಬಾಲಕೃಷ್ಣ ಅವರು ಕೃತಜ್ಞತೆ ಹೇಳಿ ನಗದು ದೇಣಿಗೆಯನ್ನು ನೀಡಿ ಪ್ರೋತ್ಸಾಹಿಸಿದರು, ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜ್ ಎಚ್ ಅವರು. ನೀವು ನಡೆಸುತ್ತಿರುವಂತಹ ಸಮಾಜಸೇವಾ ಕಾರುಣ್ಯ ಚಟುವಟಿಕೆಗಳು ಶ್ಲಾಘನೀಯವಾಗಿದೆ ಎಂದು ಹೇಳಿ ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡವನ್ನು ಅಭಿನಂದಿಸಿದರು.
ವರದಿ : D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ