janadhvani

Kannada Online News Paper

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್‌ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ರವರು ಇಂದು ಬೆಳಿಗ್ಗೆ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ್ ರವರು ಪ್ರಮಾಣ ವಚನ ಬೋಧಿಸಿದರು.

ನಿರ್ಗಮಿತ ರಾಜ್ಯಪಾಲರಾದ ವಜುಭಾಯಿ ರೂಡಾಭಾಯಿ ವಾಲಾ ರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಇನ್ನಿತರ ರಾಜಕಾರಣಿಗಳು ಉಪಸ್ಥಿತರಿದ್ದರು.