ಗುವಾಹಟಿ: ದೇಶದೆಲ್ಲೆಡೆ ಲವ್ ಜಿಹಾದ್ ಪ್ರಕರಣಗಳ ಕುರಿತ ಚರ್ಚೆ ವ್ಯಾಪಕ ಸುದ್ದಿಯಲ್ಲಿರುವಾಗಲೇ ಅಸ್ಸಾಂ ಸರಕಾರ ಲವ್ ಜಿಹಾದ್ ಮಟ್ಟ ಹಾಕಲು ಶೀಘ್ರದಲ್ಲೇ ಕಾನೂನು ಜಾರಿತರಲು ಮುಂದಾಗಿದೆ.
ಈ ಕಾನೂನು ಹಿಂದೂ ಮತ್ತು ಮುಸಲ್ಮಾನರು ಸೇರಿದಂತೆ ಎಲ್ಲರಿಗೂ ಏಕರೂಪವಾಗಿರುತ್ತದೆ ಎಂದು ಹೇಳಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಪ್ರೀತಿ ಹೆಸರಲ್ಲಿ ತನ್ನ ಧರ್ಮ ಮತ್ತು ಇತರೆ ವೈಯಕ್ತಿಕ ಮಾಹಿತಿಗಳನ್ನು ಮರೆಮಾಚಿ ಮೋಸ ಮಾಡೋದು ಕೂಡ ಲವ್ ಜಿಹಾದ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮ ಸರ್ಕಾರ ಬಂದು ಎರಡು ತಿಂಗಳಷ್ಟೇ ಆಗುತ್ತಿದೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮೊದಲು ಹಸು ಸಂರಕ್ಷಣಾ ಕಾನೂನನ್ನು ಜಾರಿ ತರುತ್ತೇವೆ. ಮುಂದಿನ ತಿಂಗಳು ಎರಡು ಮಕ್ಕಳು ನೀತಿಯನ್ನು ಅನುಷ್ಟಾನಗೊಳಿಸುತ್ತೇವೆ. ಬಳಿಕ ಲವ್ ಜಿಹಾದ್ ಕಾನೂನು ಜಾರಿ ತರುತ್ತೇವೆ ಎಂದು ಹೇಳಿದ್ದಾರೆ.
ನಾವು ಲವ್ಜಿಹಾದ್ ಪದವನ್ನು ಬಳಸಲು ಬಯಸುವುದಿಲ್ಲ. ಏಕೆಂದರೆ ಹಿಂದೂವೊಬ್ಬ ಹಿಂದೂ ಯುವತಿಗೆ ಮೋಸ ಮಾಡಬಾರದು ಎಂದು ನಾವು ಭಾವಿಸುತ್ತೇವೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಮೋಸ ಮಾಡುವುದು ಮಾತ್ರ ಲವ್ ಜಿಹಾದ್ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲವ್ ಜಿಹಾದ್ ಅನ್ನೋದು ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯ ನಡುವಿನ ಸಂಬಂಧವನ್ನು ಗುರಿಯಾಗಿಸಿಕೊಂಡು ಬಲಪಂಥೀಯ ಗುಂಪುಗಳು ಬಳಸುವ ಪದವಾಗಿದ್ದು, ಇದು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ ಹುನ್ನಾರವಾಗಿದೆ ಎಂದು ಹೇಳಲಾಗುತ್ತಿದೆ. ಈ ವರ್ಷ ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ