ಗುವಾಹಟಿ: ದೇಶದೆಲ್ಲೆಡೆ ಲವ್ ಜಿಹಾದ್ ಪ್ರಕರಣಗಳ ಕುರಿತ ಚರ್ಚೆ ವ್ಯಾಪಕ ಸುದ್ದಿಯಲ್ಲಿರುವಾಗಲೇ ಅಸ್ಸಾಂ ಸರಕಾರ ಲವ್ ಜಿಹಾದ್ ಮಟ್ಟ ಹಾಕಲು ಶೀಘ್ರದಲ್ಲೇ ಕಾನೂನು ಜಾರಿತರಲು ಮುಂದಾಗಿದೆ.
ಈ ಕಾನೂನು ಹಿಂದೂ ಮತ್ತು ಮುಸಲ್ಮಾನರು ಸೇರಿದಂತೆ ಎಲ್ಲರಿಗೂ ಏಕರೂಪವಾಗಿರುತ್ತದೆ ಎಂದು ಹೇಳಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಪ್ರೀತಿ ಹೆಸರಲ್ಲಿ ತನ್ನ ಧರ್ಮ ಮತ್ತು ಇತರೆ ವೈಯಕ್ತಿಕ ಮಾಹಿತಿಗಳನ್ನು ಮರೆಮಾಚಿ ಮೋಸ ಮಾಡೋದು ಕೂಡ ಲವ್ ಜಿಹಾದ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮ ಸರ್ಕಾರ ಬಂದು ಎರಡು ತಿಂಗಳಷ್ಟೇ ಆಗುತ್ತಿದೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮೊದಲು ಹಸು ಸಂರಕ್ಷಣಾ ಕಾನೂನನ್ನು ಜಾರಿ ತರುತ್ತೇವೆ. ಮುಂದಿನ ತಿಂಗಳು ಎರಡು ಮಕ್ಕಳು ನೀತಿಯನ್ನು ಅನುಷ್ಟಾನಗೊಳಿಸುತ್ತೇವೆ. ಬಳಿಕ ಲವ್ ಜಿಹಾದ್ ಕಾನೂನು ಜಾರಿ ತರುತ್ತೇವೆ ಎಂದು ಹೇಳಿದ್ದಾರೆ.
ನಾವು ಲವ್ಜಿಹಾದ್ ಪದವನ್ನು ಬಳಸಲು ಬಯಸುವುದಿಲ್ಲ. ಏಕೆಂದರೆ ಹಿಂದೂವೊಬ್ಬ ಹಿಂದೂ ಯುವತಿಗೆ ಮೋಸ ಮಾಡಬಾರದು ಎಂದು ನಾವು ಭಾವಿಸುತ್ತೇವೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಮೋಸ ಮಾಡುವುದು ಮಾತ್ರ ಲವ್ ಜಿಹಾದ್ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲವ್ ಜಿಹಾದ್ ಅನ್ನೋದು ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯ ನಡುವಿನ ಸಂಬಂಧವನ್ನು ಗುರಿಯಾಗಿಸಿಕೊಂಡು ಬಲಪಂಥೀಯ ಗುಂಪುಗಳು ಬಳಸುವ ಪದವಾಗಿದ್ದು, ಇದು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ ಹುನ್ನಾರವಾಗಿದೆ ಎಂದು ಹೇಳಲಾಗುತ್ತಿದೆ. ಈ ವರ್ಷ ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ