ರಿಯಾದ್: ಕೋವಿಡ್ ಹಿನ್ನಲೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಭಾರತೀಯ ವಲಸಿಗರು ಎದುರಿಸುತ್ತಿರುವ ಪ್ರಯಾಣ ಬಿಕ್ಕಟ್ಟನ್ನು ಪರಿಹರಿಸಲು ಗರಿಷ್ಠ ಪ್ರಯತ್ನಗಳು ನಡೆಯುತ್ತಿವೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಔಸಾಫ್ ಸಯೀದ್ ಹೇಳಿದ್ದಾರೆ.
ಕೋವಿಡ್ ವಿರುದ್ಧ ಲಸಿಕೆ ಹಾಕಿದ ವಲಸಿಗರಿಗೆ ಭಾರತದಿಂದ ನೇರವಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಅವಕಾಶ ನೀಡುವಂತೆ ಸೌದಿ ಆರೋಗ್ಯ ಮತ್ತು ವಾಯುಯಾನ ಸಚಿವಾಲಯಗಳನ್ನು ಕೋರಿದ್ದೇನೆ ಮತ್ತು ಪರಿಹಾರದ ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.
ಅವರು ಜಿದ್ದಾದ ಭಾರತೀಯ ಕಾನ್ಸುಲೇಟ್ ಸಭಾಂಗಣದಲ್ಲಿ ಭಾರತೀಯ ಸಾಮಾಜಿಕ ಕಾರ್ಯಕರ್ತರೊಂದಿಗೆ ಮಾತನಾಡುತ್ತಿದ್ದರು. ಭಾರತದ ಲಸಿಕೆ ಪ್ರಮಾಣಪತ್ರವನ್ನು ಸ್ವೀಕರಿಸಲು ಪ್ರಸ್ತುತ ಸೌದಿ ಅರೇಬಿಯಾ ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಸೌದಿ ಅಧಿಕಾರಿಗಳನ್ನು ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ