ವಿದಿಶಾ, ಜು. 16: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಗುರುವಾರ ಸಂಜೆ ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವ ವೇಳೆ ಹಲವಾರು ಜನರು ಬಾವಿಗೆ ಬಿದ್ದಿದ್ದು, ಇವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ 19 ಜನರನ್ನು ರಕ್ಷಿಸಲಾಗಿದೆ, ಒಟ್ಟು 40 ಜನರು ಬಾವಿಯಲ್ಲಿ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 50 ಕಿ.ಮೀ ದೂರದಲ್ಲಿರುವ ಗಂಜ್ ಬಸೋದಾದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಬಾವಿ ಸುಮಾರು 50 ಅಡಿ ಆಳದಲ್ಲಿದ್ದು, ನೀರಿನ ಮಟ್ಟ ಸುಮಾರು 20 ಅಡಿಗಳು.
ಶುಕ್ರವಾರದ ಇತ್ತೀಚಿನ ಮಾಹಿತಿಯ ಪ್ರಕಾರ, ನಾಲ್ಕು ಶವಗಳು ಪತ್ತೆಯಾಗಿದ್ದು, 15 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇನ್ನೂ 13 ಜನರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತು ವಿದಿಶಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ನಿರ್ದೇಶನದ ಮೇರೆಗೆ ಗುರುವಾರ ತಡರಾತ್ರಿ ಸ್ಥಳಕ್ಕೆ ಧಾವಿಸಿದ ವಿದಿಷಾ ಗಾರ್ಡಿಯನ್ ಸಚಿವ ವಿಶ್ವಸ್ ಸರಂಗ್ ಶುಕ್ರವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ , “ವಿದಿಷಾದ ಗಂಜಬಸೋದದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. 19 ಜನರನ್ನು ರಕ್ಷಿಸಲಾಗಿದೆ. 3 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಹ ಕಾರ್ಯಾಚರಣೆ ನಡೆಸುತ್ತಿದೆ . ಇಲ್ಲಿನ ಭೂಮಿ ಕುಸಿಯುತ್ತಿದ್ದು, ಕಾರ್ಯಾಚರಣೆ ಮುಗಿಯುವವರೆಗೆ ನಿಖರವಾದ ಮಾಹಿತಿಯನ್ನು ನೀಡುವುದು ಕಷ್ಟ ”
ಮೃತರು ಮತ್ತು ಗಾಯಗೊಂಡವರು ಸೇರಿ 40 ಜನರಿದ್ದಾರೆ. ಇವರೆಲ್ಲಾ ಬಾಲಕಿಯನ್ನು ಹೊರತೆಗೆಯಲು ಪ್ರಯತ್ನಿಸುತ್ತಿರುವ ರಕ್ಷಕರನ್ನು ವೀಕ್ಷಿಸಲು ನೆರೆದಿದ್ದರು, ಮತ್ತು ಅವರಿಗೆ ನೆರವಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ ಆಟವಾಡುತ್ತಿದ್ದಾಗ ಬಾವಿಗೆ ಬಾಲಕಿ ಬಿದಿದ್ದಾಳೆ. ಈ ಕುರಿತು ಉನ್ನತ ತನಿಖೆಗೆ ಸಿಎಂ ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ