ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ SჄS.SSF.KCF ಕಾರ್ಯಕರ್ತರನ್ನೊಳಗೊಂಡ ತುರ್ತು ಸೇವಾ ತಂಡ “ಸಹಾಯ್” ವತಿಯಿಂದ ರಾಜ್ಯಾದ್ಯಂತ ನಡೆಯುವ ನಿರ್ಮಲ ಮನಸ್ಸು ನೈರ್ಮಲ್ಯ ಪರಿಸರ” ಸಹಾಯ್ ಸ್ವಚ್ಛತಾ ಅಭಿಯಾನದ ಅಂಗವಾಗಿ ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡದಿಂದ ಕರೋಪಾಡಿ ಗ್ರಾಮ ಪಂಚಾಯತ್ ಗ್ರಾಮ ಕರಣಿಕರ ಕಚೇರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತನಡ್ಕ ಹಾಗೂ ಧಾರ್ಮಿಕ ಕೇಂದ್ರ ಬಸ್ ತಂಗುದಾನ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಶುಚೀಕರಣ ಗೊಳಿಸುವ ಮೂಲಕ ದ್ವಿತೀಯ ಹಂತದ ನಿರ್ಮಲ ಮನಸ್ಸು ನೈರ್ಮಲ್ಯ ಪರಿಸರ” ಸಹಾಯ್ ಸ್ವಚ್ಛತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಸ್ವಚ್ಛತಾ ಕಾರ್ಯಕ್ರಮವನ್ನು ಸಾರ್ವಜನಿಕರು ವರ್ತಕರು ಹಾಗೂ ಊರ ಪ್ರಮುಖರು ತುಂಬು ಹೃದಯದಿಂದ ಶ್ಲಾಘಿಸಿದರು. ಆನಂದ ತೆಂಕ ಬಯಲು ಮಿತ್ತನಡ್ಕ ಅವರು ನೀವು ಮಾಡುವ ಸಮಾಜಸೇವೆ ಕಾರ್ಯಗಳು ಅಭಿನಂದನಾರ್ಹವಾಗಿದೆ ಎಂದು ಹೇಳಿ ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡಕ್ಕೆ ಕುಡಿಯಲು ತಂಪುಪಾನೀಯ ನೀಡಿದರು.
ಅದೇ ರೀತಿ, ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನ್ವರ್ ಕರೋಪಾಡಿ ಅವರು ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡವನ್ನುದ್ದೇಶಿಸಿ ನಿಮ್ಮನ್ನು ಮೊದಲ ಬಾರಿ ನೋಡಿದ್ದು ಜನರು ಮನೆಯಿಂದ ಹೊರಗಡೆ ಹೋಗಲು ಹೆದರುತ್ತಿದ್ದ ಕೋವಿಡ್ ಅಬ್ಬರದ ಸಮಯದಲ್ಲಿ ಎಲ್ಲಾ ಊರಿಗೆ ಹೋಗಿ ಸ್ಯಾನಿಟೈಸರ್ ಸಿಂಪಡನೆ ಮಾಡಿ ಜನಜಾಗೃತಿ ಮೂಡಿಸಿದ ಹಾಗೆ ನಮ್ಮೂರಿಗೂ ಬಂದು ಸ್ಯಾನಿಟೈಸರ್ ಸಿಂಪಡನೆ ಮಾಡಿ ಜನಜಾಗೃತಿ ಮೂಡಿಸಿದ್ದರು.

ಅದಲ್ಲದೆ ನಮ್ಮ ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಬಂದ ಮನೆಗೆ ಅಗತ್ಯ ವಸ್ತುಗಳನ್ನೊಳಗೊಂಡ ರೇಷನ್ ಕಿಟ್ಟನ್ನು ಸೋಂಕಿತರ ಮನೆಬಾಗಿಲಿಗೆ ತಲುಪಿಸಿ ಸಾಂತ್ವಾನ ಹೇಳಿ ಇದೀಗ ಮಗದೊಮ್ಮೆ ನಮ್ಮೂರಿಗೆ ಬಂದು ಸ್ವಚ್ಛತೆಯನ್ನು ಮಾಡಿದ ನಿಮಗೆ ನನ್ನ ಹಾಗೂ ನಮ್ಮ ಊರಿನ ಜನರ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು, ದೇವರು ನಿಮ್ಮೆಲ್ಲ ಸತ್ಕರ್ಮವನ್ನು ಸ್ವೀಕರಿಸಿ ನಿಮಗೆ ಅರ್ಹವಾದ ಪ್ರತಿಫಲವನ್ನು ನೀಡಲಿ ಎಂದು ಪ್ರಾರ್ಥನೆ ಮಾಡಿ ಹಾರೈಸಿದರು.
ವರದಿ: D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ