ರಿಯಾದ್ : ಸೌದಿ ಅರೇಬಿಯಾದಲ್ಲಿ, ತವಕ್ಕಲ್ನಾ ಆ್ಯಪ್ನಲ್ಲಿ ಆರೋಗ್ಯ ಸ್ಥಿತಿಯನ್ನು ತಿರುಚಿದ ಕಾರಣಕ್ಕಾಗಿ 122 ಜನರನ್ನು ಬಂಧಿಸಲಾಗಿದೆ. ಹಣ ಪಾವತಿಸಿ, ಆ್ಯಪ್ನಲ್ಲಿ ಆರೋಗ್ಯ ಸ್ಥಿತಿಯನ್ನು ಸರಿಪಡಿಸಿದ ಪ್ರಕರಣದಲ್ಲಿ ಈ ಬಂಧನ ಮಾಡಲಾಗಿದೆ.ಸ್ಥಳೀಯರು ಮತ್ತು ವಿದೇಶಿಯರು ಸೇರಿದಂತೆ ಹಣ ಪಡೆದುಕೊಂಡ ಅಧಿಕಾರಿಗಳು ಮತ್ತು ಮಧ್ಯವರ್ತಿಗಳನ್ನು ಬಂಧಿಸಲಾಗಿದೆ.
ಸೌದಿ ಅರೇಬಿಯಾದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯನ್ನು ಸ್ಪಷ್ಟಪಡಿಸಲು ಕಡ್ಡಾಯಗೊಳಿಸಲಾಗಿರುವ ತವಕ್ಕಲ್ನಾ ಆ್ಯಪ್ನ್ನು ತಿರುಚಿದಕ್ಕಾಗಿ ಸ್ಥಳೀಯರು ಮತ್ತು ವಿದೇಶಿಯರನ್ನು ಒಳಗೊಂಡಿರುವ ಈ ಗುಂಪನ್ನು ಬಂಧಿಸಲಾಯಿತು.
ಸೌದಿ ಭ್ರಷ್ಟಾಚಾರ ನಿಗ್ರಹ ಆಯೋಗ ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಿದೆ. ದಿನಗಳ ಹಿಂದೆ, ಪೂರ್ವ ಪ್ರಾಂತ್ಯದಿಂದ 12 ಜನರ ಗುಂಪನ್ನು ಸೆರೆಹಿಡಿಯಲಾಗಿತ್ತು. ನಂತರದ ತನಿಖೆಯಲ್ಲಿ ಹೆಚ್ಚಿನ ಮಂದಿಯನ್ನು ಬಂಧಿಸಲಾಗಿದೆ.
ಹೊಸದಾಗಿ 122 ಜನರನ್ನು ಬಂಧಿಸಲಾಗಿದೆ. ಹಣವನ್ನು ಪಾವತಿಸಿದರೆ ಅಗತ್ಯಕ್ಕೆ ತಕ್ಕಂತೆ ತವಕ್ಕಲ್ನಾದಲ್ಲಿ ಆರೋಗ್ಯ ಸ್ಥಿತಿಯನ್ನು ಬದಲಾಯಿಸಿ ನೀಡಲಾಗುವುದು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರಪಡಿಸಿದ್ದರು. ಇದರ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ ತನಿಖೆ ಆರಂಭಿಸಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ