ಬೆಂಗಳೂರು: ಜುಲೈ 26 ಅಂದರೆ ನಾಳೆಯಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಲು ಅವಕಾಶವಿರುತ್ತದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ. ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರದಿದ್ದರೂ ಪ್ರಾಧ್ಯಾಪಕರು ಮಾತ್ರ ಕಡ್ಡಾಯವಾಗಿ ಹಾಜರಾಗಬೇಕು.
ಸುಮಾರು ಮೂರು ತಿಂಗಳ ಬಳಿಕ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳನ್ನ ಕಡ್ಡಾಯವಾಗಿ ತೆರೆಯಲು ವಿವಿಗಳು ಸೂಚನೆ ನೀಡಿವೆ. ಈಗಾಗಲೇ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರದಲ್ಲೇ ಬಾಕಿ ಉಳಿದ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ನಾಳೆಯಿಂದ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಭೌತಿಕ ತರಗತಿ ಶುರು ಮಾಡಲಾಗುವುದು.
ಪದವಿ ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿಗಳೇನು?
- ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
- ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಇಲ್ಲ.
- ಸ್ವ ಇಚ್ಛೆಯಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು.
- ಕಾಲೇಜು ಪ್ರಾರಂಭವಾದರೂ ಆನ್ಲೈನ್ ತರಗತಿಗಳು ಎಂದಿನಂತೆ ನಡೆಯಲಿದೆ.
- ಅಧ್ಯಾಪಕರ ವರ್ಗ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
- ಪ್ರತಿ ಕಾಲೇಜಿನಲ್ಲೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕು.
- ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು.
- ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾಲೇಜು, ಕ್ಯಾಂಪಸ್ನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
- ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾಲೇಜು ಆಡಳಿತ ಮಂಡಳಿ ಕ್ರಮವಹಿಸಬೇಕು.
- ಕಾಲೇಜು, ವಿವಿ ಆವರಣದಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭ ಮಾಡಬೇಕು.
- ಕಾಲೇಜು, ವಿವಿಗಳಲ್ಲಿ ಈಜುಕೊಳಗಳ ಪ್ರಾರಂಭಕ್ಕೆ ನಿಷೇಧ.
- ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು.
- ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ