ಬೆಂಗಳೂರು: ಇಂದು ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಿ ಎಸ್ ಯಡಿಯೂರಪ್ಪ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿರುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುವುದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಯಾರೇ ಆದರೂ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಅವರು ಹೇಳಿದರು. ಇದೇ ವೇಳೆ ಹೈಕಮಾಂಡ್ ಗೆ ಮತ್ತು ರಾಜ್ಯದ ಜನತೆಗೆ ಹಾಗೂ ವಿಶೇಷವಾಗಿ ಶಿಕಾರಿಪುರ ಜನತೆಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಹೇಳಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ಹೇಳಿದರು.
ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು.
ರಾಜೀನಾಮೆ ನೀಡುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಒಮ್ಮೆಯೂ ಅವರು ಪೂರ್ಣ ಅವಧಿಯನ್ನು ಪೂರೈಸಿಲ್ಲ. ಅವರು ನಾಲ್ಕು ಬಾರಿಯಾಗಿ 5 ವರ್ಷ ಪೂರೈಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ