ಮಂಗಳೂರು, ಜುಲೈ 26: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸಿನಲ್ಲಿ ವಿಜೇತರಾದ ದ್ವಿತೀಯ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮವು ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್ ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆಯಿತು.
ಉಡುಪಿ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಅವರು 37 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
11 ವಿದ್ಯಾರ್ಥಿಗಳಿಗೆ ಶಾಮಿಲಿ ಪದವಿ ಹಾಗೂ 26 ವಿದ್ಯಾರ್ಥಿನಿಯರಿಗೆ ಶಾಮಿಲ ಪದವಿಯೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಇದೇ ವೇಳೆ ಈ ತರಗತಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾದ ಪುರುಷರ ವಿಭಾಗದಲ್ಲಿ ಇಬ್ಬರಿಗೆ ಹಾಗೂ ಮಹಿಳೆಯರ ವಿಭಾಗದ ಇಬ್ಬರಿಗೆ ಮಾಣಿ ಉಸ್ತಾದ್ ಅವರು ಬಹುಮಾನ ನೀಡಿ ಹಾರೈಸಿದರು.

ಕಾರ್ಯಕ್ರಮವನ್ನು ದಾರುಲ್ ಇರ್ಶಾದ್ ಮೇನೇಜಿಂಗ್ ಡೈರೆಕ್ಟರ್ ಶೆರೀಫ್ ಸಖಾಫಿ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ರಾಜ್ಯ ಸುನ್ನೀ ಯುವಜನ ಸಂಘ ನಾಯಕ ಡಿ.ಕೆ. ಉಮರ್ ಸಖಾಫಿ ಕಂಬಳಬೆಟ್ಟು, ಅಶ್ಶಮಾಯಿಲ್ ಮುಹಮ್ಮದಿಯ್ಯ ವಿಶೇಷ ಕೋರ್ಸ್ ಅಧ್ಯಾಪಕ ಇಸ್ಮಾಈಲ್ ಸಅದಿ ಮಾಚಾರ್, ದಾರುಲ್ ಇರ್ಶಾದ್ ಸದರ್ ಮುಅಲ್ಲಿಂ ಅಬ್ದುಲ್ ರಝಾಕ್ ಮುಸ್ಲಿಯಾರ್ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ