ಮಂಗಳೂರು, ಜುಲೈ 26: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸಿನಲ್ಲಿ ವಿಜೇತರಾದ ದ್ವಿತೀಯ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮವು ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್ ಕೆ.ಜಿ.ಎನ್ ಮಿತ್ತೂರಿನಲ್ಲಿ ನಡೆಯಿತು.
ಉಡುಪಿ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಅವರು 37 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
11 ವಿದ್ಯಾರ್ಥಿಗಳಿಗೆ ಶಾಮಿಲಿ ಪದವಿ ಹಾಗೂ 26 ವಿದ್ಯಾರ್ಥಿನಿಯರಿಗೆ ಶಾಮಿಲ ಪದವಿಯೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಇದೇ ವೇಳೆ ಈ ತರಗತಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾದ ಪುರುಷರ ವಿಭಾಗದಲ್ಲಿ ಇಬ್ಬರಿಗೆ ಹಾಗೂ ಮಹಿಳೆಯರ ವಿಭಾಗದ ಇಬ್ಬರಿಗೆ ಮಾಣಿ ಉಸ್ತಾದ್ ಅವರು ಬಹುಮಾನ ನೀಡಿ ಹಾರೈಸಿದರು.

ಕಾರ್ಯಕ್ರಮವನ್ನು ದಾರುಲ್ ಇರ್ಶಾದ್ ಮೇನೇಜಿಂಗ್ ಡೈರೆಕ್ಟರ್ ಶೆರೀಫ್ ಸಖಾಫಿ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ರಾಜ್ಯ ಸುನ್ನೀ ಯುವಜನ ಸಂಘ ನಾಯಕ ಡಿ.ಕೆ. ಉಮರ್ ಸಖಾಫಿ ಕಂಬಳಬೆಟ್ಟು, ಅಶ್ಶಮಾಯಿಲ್ ಮುಹಮ್ಮದಿಯ್ಯ ವಿಶೇಷ ಕೋರ್ಸ್ ಅಧ್ಯಾಪಕ ಇಸ್ಮಾಈಲ್ ಸಅದಿ ಮಾಚಾರ್, ದಾರುಲ್ ಇರ್ಶಾದ್ ಸದರ್ ಮುಅಲ್ಲಿಂ ಅಬ್ದುಲ್ ರಝಾಕ್ ಮುಸ್ಲಿಯಾರ್ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ