ಕೊರೊನಾ ವೈರಸ್ ಶೈಕ್ಷಣಿಕ ರಂಗದ ಮೇಲೆ ಬೃಹತ್ ಮಟ್ಟದ ಏಟು ನೀಡಿದೆ. ಕೋವಿಡ್-19 ಹಾವಳಿಯಿಂದ ಜಗತ್ತಿನಾದ್ಯಂತ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಅವುಗಳ ಪುನರಾರಂಭದ ಬಗ್ಗೆ ಇನ್ನೂ ಅನಿಶ್ಚಿತತೆ ಮನೆ ಮಾಡಿದೆ. ಕಲಿಯ ಬೇಕಾದ ವಿದ್ಯಾರ್ಥಿಗಳು ಶಿಕ್ಷಣ ಬಿಟ್ಟು ವಕ್ರ ದಾರಿಯನ್ನು ಹುಡುಕುತ್ತಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜಾಗೃತಿಯನ್ನು ನೀಡುವುದು ಕರ್ತವ್ಯವಾಗಿದೆ.
ಶಿಕ್ಷಣವಿಲ್ಲದ ಬದುಕಿಗೆ ಸಮಾಜದಲ್ಲಿ ಗೌರವವಿಲ್ಲ. ಅವನನ್ನು ಸಮಾಜ ಬೇರೊಂದು ಕಣ್ಣಿನಿಂದ ನೋಡುತ್ತದೆ. ಶಿಕ್ಷಣ ಮನುಷ್ಯನಿಗೆ ಪ್ರಬುದ್ಧತೆ, ಪಕ್ವತೆಯನ್ನು ನೀಡುತ್ತದೆ.
ಉತ್ತರ ಕರ್ನಾಟಕದಾದ್ಯಂತ ಶೈಕ್ಷಣಿಕ ಜಾಗೃತಿಯನ್ನು ಮೂಡಿಸುತ್ತಿರುವ ಇಹ್ಸಾನ್ ಕಳೆದ ಹತ್ತು ವರ್ಷಗಳಿಂದ ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣವನ್ನು ನೀಡುತ್ತಾ ಅವರನ್ನು ಸುಸಂಸ್ಕೃತರನ್ನಾಗಿ ಬೆಳೆಸುತ್ತಾ ಬಂದಿದೆ.
ಈ ಅನಿವಾರ್ಯ ಸಮಯದಲ್ಲಿ ಇಹ್ಸಾನ್ ಕರ್ನಾಟಕ ‘ಎಜುಕೇಶನ್ ಅವೇರ್ನೆಸ್ ಕಾಂಪೈನ್’ ಹಮ್ಮಿಕೊಂಡಿದ್ದು ‘ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ”‘ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ ಒಂದರಿಂದ ಹದಿನೈದರ (1-15) ತನಕ ಈ ಕಾಂಪೈನ್ ನಡೆಯಲಿದೆ. ಆ ಮೂಲಕ ವಿದ್ಯಾರ್ಥಿ ಬದುಕಿಗೆ ಶಿಕ್ಷಣ ಜಾಗೃತಿಯನ್ನು ಇಹ್ಸಾನ್ ನೀಡಲಿದೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ