ಕೋವಿಡ್ ಪ್ಯಾಂಡಮಿಕ್ ಮತ್ತು ಲಾಕ್ಡೌನ್ ಪರಿಣಾಮ ಸ್ಥಗಿತಗೊಂಡಿದ್ದ ಅಂತರಾಷ್ಟ್ರೀಯ ವಿಮಾನ ಪ್ರಯಾಣಗಳು ಹಂತಹಂತವಾಗಿ ತೆರೆದುಕೊಳ್ಳುತ್ತಿದೆ.
ಷರತ್ತು ಬದ್ಧ ಪ್ರಯಾಣಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆ ಪೈಕಿ ಪ್ರಮುಖವಾದ ಷರತ್ತೆಂದರೆ ‘ದುಬೈ ಅಥವಾ ಯುಎಇ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ರ್ಯಾಪಿಡ್ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು’ ಎಂಬುದು. ಹಾಗಾಗಿ ಭಾರತೀಯ ಅನಿವಾಸಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ದೇಶದ ಪ್ರತಿಶತ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ರ್ಯಾಪಿಡ್ ಕೋವಿಡ್ ಟೆಸ್ಟ್ ಸೌಲಭ್ಯವನ್ನು ಒದಗಿಸುತ್ತಿವೆ, ಪ್ರಯಾಣಿಕರೆಲ್ಲವೂ ನಿಟ್ಟುಸಿರು ಬಿಟ್ಟು ತಮ್ಮ ಪ್ರಯಾಣಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಆದರೆ.. ನಮ್ಮ ಕರಾವಳಿಯ ಅನಿವಾಸಿಗಳ ರೋದನೆ ಮಾತ್ರ ಇನ್ನೂ ಅರಣ್ಯ ರೋದನೆಯಾಗಿದೆ. ‘ದೇವರು ಕೊಟ್ಟರೂ ಪೂಜಾರಿ ಬಿಡ’ ಎಂಬ ಮಾತಿನಂತೆ ಯುಎಇ ಸರ್ಕಾರ ಪ್ರಯಾಣಕ್ಕೆ ಅಸ್ತು ಎಂದರೂ ಮಂಗಳೂರಿನಿಂದ ವಿದೇಶ ಪ್ರಯಾಣ ಬಯಸುವ ಪ್ರಯಾಣಿಕರು ಮಾತ್ರ ನಿರಾಶರಾಗಿದ್ದಾರೆ.
ಹೌದು, ಸರಿಸುಮಾರು 70 ವರ್ಷಗಳ ಇತಿಹಾಸವಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಖಾಸಗೀಕರಣಗೊಡಿದ್ದರೂ ಇನ್ನೂ ಕೂಡ ’ರ್ಯಾಪಿಡ್ ಕೋವಿಡ್ ಟೆಸ್ಟ್’ ಸೌಲಭ್ಯವಿಲ್ಲ ಎಂದರೆ ನೀವು ನಂಬಲೇ ಬೇಕು! ಜಗತ್ತು ಮತ್ತು ತಂತ್ರಜ್ಞಾನ ಇಷ್ಟೊಂದು ಮುಂದುವರಿದರೂ ಇಲ್ಲಿ ಇನ್ನೂ ರ್ಯಾಪಿಡ್ ಟೆಸ್ಟ್ ಆರಂಭಿಸದಿರುವುದು ವಿಪರ್ಯಾಸ.
ತೀರಾ ಇತ್ತೀಚಿಗೆ ಲೋಕಾರ್ಪಣೆಗೊಂಡ ನೆರೆಯ ಕಣ್ಣೂರು ವಿಮಾನ ನಿಲ್ದಾಣದಲ್ಲಿಯೂ ಕೂಡ ರ್ಯಾಪಿಡ್ ಕೋವಿಡ್ ಟೆಸ್ಟ್ ಸೌಲಭ್ಯ ಕಲ್ಪಿಸಲಾಗಿದೆ. ಇತಿಹಾಸಗಳ ಹಿನ್ನೆಲೆಯಿರುವ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತ್ರ ಯಾಕೆ ಸೌಲಭ್ಯವಿಲ್ಲ?
ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಬಗ್ಗೆ ತುರ್ತಾಗಿ ಗಮನವಹಿಸಬೇಕಾಗಿದೆ.
ಜಿಲ್ಲೆಯ ಪ್ರಯಾಣಿಕರು ಎಲ್ಲೆಲ್ಲಿಗೋ ತೆರಳಿ ಪರದಾಡಿ ಅಲ್ಲಿಂದ ವಿದೇಶ ಯಾತ್ರೆಗೆಯ್ಯುತ್ತಿರುವುದು ಜಿಲ್ಲಾಡಳಿತದ ಗಮನಿಸಬೇಕಾಗಿದೆ
ಮಾನ್ಯ ದ.ಕ ಜಿಲ್ಲಾಧಿಕಾರಿಗಳು ಅಧಿಕಾರ ವಹಿಸಿಕೊಂಡ ದಿನದಿಂದ ಹಿಡಿದು ಇಂದಿನವರೆಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತಿದ್ದಾರೆ, ಸಾಕಷ್ಟು ಸಮಸ್ಯೆ ಗಳಿಗೆ ಸ್ಪಂದಿಸಿ ಕ್ರಮ ಕೈಗೊಂಡಿದ್ದಾರೆ, ಬಹಳಷ್ಟು ಅವ್ಯವಸ್ಥೆಗಳನ್ನು ತ್ವರಿತವಾಗಿ ಪರಿಹರಿಸಿದ್ದಾರೆ. ಈ ಪೈಕಿ ಅತ್ಯಗತ್ಯವಾಗಿ ನಮ್ಮ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಟೆಸ್ಟ್ ಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ.
ಹಾಗಾಗಿ ಮಾನ್ಯ ಜಿಲ್ಲಾಧಿಕಾರಿಗಳು ತಕ್ಷಣವೇ ವಿದೇಶಿ ಪ್ರವಾಸಿಗಳ, ಪ್ರಯಾಣಿಕರ ಮನವಿಗೆ ತಕ್ಷಣ ಸ್ಪಂದಿಸಬೇಕಾಗಿದೆ.
ಆದಷ್ಟು ಬೇಗ ರ್ಯಾಪಿಡ್ ಟೆಸ್ಟ್ ಸೌಲಭ್ಯವನ್ನು ಒದಗಿಸುವ ಬಗ್ಗೆ ಜಿಲ್ಲಾಡಳಿತ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕಾಗಿದೆ. ದ.ಕ ಜಿಲ್ಲಾಡಳಿತಕ್ಕೆ ಕಪ್ಪುಚುಕ್ಕೆಯಾಗಿ ಮಾರ್ಪಟ್ಟಿರುವ ಈ ಸಮಸ್ಯೆ ತಕ್ಷಣ ನಿವಾರಣೆಯಾಗಬೇಕು. ಕಾರ್ಯ ದಕ್ಷತೆಗೆ ಹೆಸರುವಾಸಿಯಾಗಿರುವ ಮಾನ್ಯ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ರವರು ಜಿಲ್ಲೆಯ ಅನಿವಾಸಿ ಭಾರತೀಯರ ಈ ಸಮಸ್ಯೆಗೆ ಆದಷ್ಟು ಬೇಗ ತಿಲಾಂಜಲಿ ಹಾಕುವರು ಎಂದು ಭಾವಿಸುತ್ತೇವೆ.
ಇತೀ,
~ ಅಬ್ದುಲ್ ಜಲೀಲ್ ನಿಝಾಮಿ, ಕೊಡಗು.
(ಅಧ್ಯಕ್ಷರು, ಕರ್ನಾಟಕ ಕಲ್ಚರಲ್ ಫೌಂಡೇಶನ್ – ಯುಎಇ)
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ