ಬೆಂಗಳೂರು: ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ ಹೇಳುತ್ತವೆ. ಕೋವಿಡ್ ನಂತರದ ದಿನಗಳಲ್ಲಿ ರಕ್ತದ ಸಂಗ್ರಹಣೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ.
ದೇಶದಲ್ಲಿ ರಕ್ತದ ಕೊರತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ರಕ್ತದಾನ ಕಾರ್ಯಕ್ಕೆ ಬಹಳಷ್ಟು ಮಹತ್ವ ನೀಡುತ್ತಾ ಬಂದಿದೆ. ಕಳೆದ ಎರಡು ದಶಕಗಳಿಂದಲೂ ಸಂಘಟನೆಯು ಜಾತಿ, ಮತ ಭೇದವಿಲ್ಲದೇ ರಕ್ತದಾನ ಶಿಬಿರ ಮತ್ತು ವೈಯಕ್ತಿಕ ರಕ್ತದಾನದ ಮೂಲಕ ತುರ್ತು ಸಂದರ್ಭಗಳಲ್ಲಿ ರಕ್ತ ಪೂರೈಕೆ ಮಾಡಿ ಜನರ ಜೀವ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾ ಬರುತ್ತಿದೆ.
ಪಾಪ್ಯುಲರ್ ಫ್ರಂಟ್, ಮಾನವೀಯ ಸೇವೆಯನ್ನು ವ್ಯಾಪಕಗೊಳಿಸುವ, ರಕ್ತದ ಕೊರತೆ ನೀಗಿಸುವ, ಜನರಲ್ಲಿ ಜಾಗೃತಿ ಮೂಡಿಸಿ ಅವರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಒಂದು ವಿಶಾಲ ಪರಿಕಲ್ಪನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಎಂಬ ರಾಷ್ಟ್ರ ಮಟ್ಟದ ವೇದಿಕೆಗೂ ಚಾಲನೆ ನೀಡಿದೆ. ಅದರಂತೆ ಕರ್ನಾಟಕದಲ್ಲಿಯೂ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವೇದಿಕೆಯನ್ನು ರಚಿಸಲಾಗಿದೆ.
ಇದೀಗ ಜುಲೈ 15ರಿಂದ ಆಗಸ್ಟ್ 15ರ ವರೆಗೆ ರಾಜ್ಯಾದ್ಯಂತ ಬ್ಲಡ್ ಡೋನರ್ಸ್ ಫೋರಂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಅಂಗವಾಗಿ 75ನೇ ಸ್ವಾತ್ರಂತ್ರ್ಯೋತ್ಸವ ದಿನದಂದು ರಾಜ್ಯಾದ್ಯಂತ 50ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, 10 ಸಾವಿರ ಯುನಿಟ್ ರಕ್ತವನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ರಕ್ತದಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಈ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕು.
ಈ ಮೂಲಕ ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯನ್ನು ನೀಗಿಸಲು ಮತ್ತು ಜನರ ಜೀವ ಉಳಿಸುವ ಮಾನವೀಯ ಸೇವೆಯಲ್ಲಿ ಕೈಜೋಡಿಸಬೇಕೆಂದು ವಿನಂತಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಎ.ಕೆ.ಅಶ್ರಫ್, ರಾಜ್ಯ ಕಾರ್ಯದರ್ಶಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ, ಅಬೂ ಸಿನಾನ್, ರಾಜ್ಯ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ, ಅಬ್ದುಲ್ ಮಜೀದ್ ಜೋಕಟ್ಟೆ, ರಾಜ್ಯ ಉಪ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ, ಇಲ್ಯಾಸ್ ಅಹ್ಮದ್, ಝೋನಲ್ ಅಧ್ಯಕ್ಷರು, ಬೆಂಗಳೂರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ