ಧಾರ್ಮಿಕ ಶಿಕ್ಷಣ ಪಡೆಯದೆ ಲೌಕಿಕ ಶಿಕ್ಷಣ ಮಾತ್ರ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗದಲ್ಲಿರುವ ಎಸ್ಎಸ್ಎಫ್ ಕಾರ್ಯಕರ್ತರಿಗೆ ಧಾರ್ಮಿಕ ವಿಜ್ಞಾನ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಸಮಿತಿ ಹಮ್ಮಿಕೊಂಡ ಕಾರ್ಯಕ್ರಮವಾಗಿದೆ “ಸುಹ್ಬಾ”
ಇದನ್ನು ವ್ಯವಸ್ಥಾಪಿತವಾಗಿ ಜಾರಿಗೊಳಿಸುವ ಸಲುವಾಗಿ ವಿವಿಧ ಘಟಕಗಳ ನಾಯಕರನ್ನು ಒಳಗೊಂಡ “ಸುಹ್ಬಾ ಮೀಟ್” ಇಂದು (12-08-2021) ಸುಂಟಿಕೊಪ್ಪದ ಮುನವ್ವಿರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು.
ಕೊಡಗು ಜಿಲ್ಲಾ ಅಧ್ಯಕ್ಷರಾದ ಶಾಫಿ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಸ್ತುತ ಸಭೆಯಲ್ಲಿ ಕರ್ನಾಟಕ ರಾಜ್ಯ ಸಮಿತಿ ದಅವಾ ಕಾರ್ಯದರ್ಶಿಗಳಾದ ಮುಸ್ತಫಾ ನಯಿಮಿ ಉಸ್ತಾದರು ತರಗತಿ ನಡೆಸಿದರು.
ಧಾರ್ಮಿಕ ಪ್ರಜ್ಞೆ ಇಲ್ಲದೆ ದುಶ್ಚಟ ದುಷ್ಕೃತ್ಯಗಳಲ್ಲಿ ತೊಡಗಿ ಸಮಾಜದಲ್ಲಿ ಶಾಂತಿ ಭಂಗವನ್ನುಂಟು ಮಾಡುತ್ತಿರುವ ಯುವ ಸಮೂಹವನ್ನು ಸರಿದಾರಿಗೆ ತಂದು ಒಂದು ಉತ್ತಮ ಸಮೂಹವನ್ನು ಸೃಷ್ಟಿಸುವ ಸಲುವಾಗಿ ಹಮ್ಮಿಕೊಂಡ ಯೋಜನೆಯಾಗಿದೆ ಇದು.
ತರಗತಿಗೆ ಕಾರ್ಯಕರ್ತರನ್ನು ಪ್ರತ್ಯೇಕವಾಗಿ ನೊಂದಾಯಿಸಿ ಪ್ರತಿ ವಾರವೂ ಶಿಕ್ಷಣ ನೀಡಲಾಗುತ್ತದೆ, ಕಾರ್ಯಕರ್ತರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೊಡಗು ಜಿಲ್ಲಾ ದಅವಾ ಕಾರ್ಯದರ್ಶಿ ರಫೀಕ್ ಲತೀಫಿ ತಿಳಿಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಸಮಿತಿ ಕೋಶಾಧಿಕಾರಿ ಅಬ್ದುಲ್ ರಹೀಮ್ ಹೊಸತೋಟ, ಸ್ವಾಧಿಕ್ ಕರ್ಕಳ್ಳಿ ಮತ್ತಿತರರು ಹಾಜರಿದ್ದರು. ಕಮರುದ್ದೀನ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ