ಭಾರತದಿಂದ ಯುಎಇಗೆ ಹೊರಡುವ ಪ್ರಯಾಣಿಕರು ಕನಿಷ್ಠ 6 ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ವರದಿ ಮಾಡಬೇಕು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.
ರಾಪಿಡ್ ಪಿಸಿಆರ್ ಪರೀಕ್ಷೆ ನಿಮಿತ್ತ ಪ್ರಯಾಣಿಕರು ಬೇಗನೆ ಬರಬೇಕು. ವಿಮಾನ ಹೊರಡುವ 4 ಗಂಟೆಗಳ ಮೊದಲು ತಪಾಸಣೆ ಆರಂಭವಾಗಲಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೇಳಿದೆ.
48 ಗಂಟೆಗಳ ಪಿಸಿಆರ್ ಫಲಿತಾಂಶದ ಜೊತೆಗೆ, ಯುಎಇಗೆ ವಾಪಸಾತಿಗೆ ನಾಲ್ಕು ಗಂಟೆಗಳ ಒಳಗಿನ ರಾಪಿಡ್ ಪಿಸಿಆರ್ ಪರೀಕ್ಷಾ ಫಲಿತಾಂಶವೂ ಕಡ್ಡಾಯವಾಗಿದೆ.ರಾಪಿಡ್ ಪಿಸಿಆರ್ ತಪಾಸಣೆಯನ್ನು ಸಕಾಲದಲ್ಲಿ ಪೂರ್ಣಗೊಳಿಸಲು ನಿರ್ಗಮನಕ್ಕೆ ಕನಿಷ್ಠ ಆರು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಬರಲು ಸೂಚಿಸಲಾಗಿದೆ.
ನಿರ್ಗಮನಕ್ಕೆ ನಾಲ್ಕು ಗಂಟೆಗಳ ಮೊದಲು ರಾಪಿಡ್ ಟೆಸ್ಟ್ ಆರಂಭವಾಗುತ್ತದೆ. ನಿರ್ಗಮನಕ್ಕೆ ಎರಡು ಗಂಟೆಗಳ ಮೊದಲು ರಾಪಿಡ್ ಟೆಸ್ಟ್ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಅಬುಧಾಬಿಯಲ್ಲಿ ಇಳಿಯುವವರು 12 ದಿನಗಳ ಕ್ವಾರಂಟೈನ್ ಹೊಂದಿರುತ್ತಾರೆ. ಅಧಿಕಾರಿಗಳು ಹೋಮ್ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಅನ್ನು ಸೂಚಿಸಬಹುದು. ಅಬುಧಾಬಿಗೆ ಆಗಮಿಸುವವರು ಆರನೇ ಮತ್ತು ಹನ್ನೊಂದನೇ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು.
ರಾಸ್ ಅಲ್ ಖೈಮಾಕ್ಕೆ ಆಗಮಿಸುವವರು ಹತ್ತು ದಿನಗಳ ಹೋಮ್ ಕ್ವಾರಂಟೈನ್ ಹೊಂದಿರುತ್ತಾರೆ. ಪಿಸಿಆರ್ ಪರೀಕ್ಷೆಯನ್ನು ನಾಲ್ಕನೇ ಮತ್ತು ಎಂಟನೇ ದಿನದಂದು ನಡೆಸಬೇಕು. ಎರಡೂ ವಿಮಾನ ನಿಲ್ದಾಣಗಳಲ್ಲಿ ಕೈಗೆ ಟ್ರ್ಯಾಕಿಂಗ್ ವಾಚ್ ಧರಿಸಲಾಗುತ್ತದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.
ಶಾರ್ಜಾ ಮತ್ತು ದುಬೈನಲ್ಲಿ ಇಳಿಯುವವರಿಗೆ,ವಿಮಾನ ನಿಲ್ದಾಣದಲ್ಲಿನ ಪಿಸಿಆರ್ ಪರೀಕ್ಷೆಯ ಫಲಿತಾಂಶದವರೆಗೆ ಅಥವಾ 24 ಗಂಟೆಗಳ ಕ್ವಾರಂಟೈನ್ ಇರಲಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ