ಆಗಸ್ಟ್ 15… ಭಾರತದ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ದಿನ. ಕಲೆ, ಸಾಹಿತ್ಯ, ಸಂಸ್ಕೃತಿಯಿಂದ ಶ್ರೀಮಂತವಾಗಿದ್ದ ನಮ್ಮ ದೇಶ ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತವಾಗಿ ಹೊಸ ರೂಪ ಪಡೆದ ಸುದಿನ ಇದು. ಇಂದು ನಾವೆಲ್ಲರೂ ಈ ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ ನಿಜ. ಆದರೆ, ಇದು ಅತ್ಯಂತ ಸುಲಭವಾಗಿ ಸಿಕ್ಕಿರುವ ಸ್ವಾತಂತ್ರ್ಯ ಖಂಡಿತಾ ಅಲ್ಲ. ಅದೆಷ್ಟೋ ದೇಶಭಕ್ತರು ತಮ್ಮ ರಕ್ತವನ್ನೇ ಬೆವರಂತೆ ಬಸಿದು ತಂದುಕೊಟ್ಟ ಸ್ವಾತಂತ್ರ್ಯ ಇದು. ತಮ್ಮ ಈ ಹೋರಾಟದ ಹಾದಿಯಲ್ಲಿ ಅದೆಷ್ಟೋ ಕೆಚ್ಚೆದೆಯ ವೀರರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದರು. ಅನುದಿನವೂ ಅನುಕ್ಷಣವೂ ದೇಶದ ಬಗ್ಗೆಯೇ ಚಿಂತಿಸುತ್ತಿದ್ದ ಈ ಸಮರ ಸೇನಾನಿಗಳ ತ್ಯಾಗದ ಫಲವೇ ಇಂದಿನ ಸ್ವಾತಂತ್ರ್ಯ.
ಯಾವ ಭಾರತೀಯನೂ ಮರೆಯಲು ಸಾಧ್ಯವೇ ಇಲ್ಲದ ದಿನ ಇದು. ಸ್ವಾತಂತ್ರ್ಯ ಸಂಗ್ರಾಮದ ಒಂದೊಂದು ಕತೆಗಳನ್ನು ಕೇಳಿದಾಗಲೂ, ಒಂದೊಂದು ಕ್ಷಣವನ್ನು ನೆನಪಿಸಿಕೊಳ್ಳುವಾಗಲೂ ದೇಶ ಪ್ರೇಮದ ಕಿಚ್ಚು ನಮ್ಮಲ್ಲಿ ಅಧಿಕವಾಗುತ್ತಲೇ ಸಾಗುತ್ತದೆ. ಇದೇ ಕಾರಣಕ್ಕೆ ಆಗಸ್ಟ್ 15 ಎಂದರೆ ಎಲ್ಲರ ಬದುಕಿನಲ್ಲೂ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ.
ನಮ್ಮ ದೇಶಕ್ಕಾಗಿ ಜೀವ ತೆತ್ತ ಅದೆಷ್ಟೋ ಕೆಚ್ಚೆದೆಯ ವೀರರ ತ್ಯಾಗ ಬಲಿದಾನವನ್ನು ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮ ದೇಶವನ್ನು ಕಟ್ಟಲು ಶ್ರಮಿಸಿದ ಪ್ರತಿಯೊಬ್ಬರು ಹಾಕಿಕೊಟ್ಟ ದೇಶಪ್ರೇಮ, ಪ್ರಾಮಾಣಿಕತೆಯ ಹಾದಿಯಲ್ಲಿ ಮುನ್ನಡೆಯುವುದು ಕೂಡಾ ಬಲು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡೋಣ.
ಸರ್ವರಿಗೂ 75ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ