ಆಗಸ್ಟ್ 15… ಭಾರತದ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ದಿನ. ಕಲೆ, ಸಾಹಿತ್ಯ, ಸಂಸ್ಕೃತಿಯಿಂದ ಶ್ರೀಮಂತವಾಗಿದ್ದ ನಮ್ಮ ದೇಶ ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತವಾಗಿ ಹೊಸ ರೂಪ ಪಡೆದ ಸುದಿನ ಇದು. ಇಂದು ನಾವೆಲ್ಲರೂ ಈ ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ ನಿಜ. ಆದರೆ, ಇದು ಅತ್ಯಂತ ಸುಲಭವಾಗಿ ಸಿಕ್ಕಿರುವ ಸ್ವಾತಂತ್ರ್ಯ ಖಂಡಿತಾ ಅಲ್ಲ. ಅದೆಷ್ಟೋ ದೇಶಭಕ್ತರು ತಮ್ಮ ರಕ್ತವನ್ನೇ ಬೆವರಂತೆ ಬಸಿದು ತಂದುಕೊಟ್ಟ ಸ್ವಾತಂತ್ರ್ಯ ಇದು. ತಮ್ಮ ಈ ಹೋರಾಟದ ಹಾದಿಯಲ್ಲಿ ಅದೆಷ್ಟೋ ಕೆಚ್ಚೆದೆಯ ವೀರರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದರು. ಅನುದಿನವೂ ಅನುಕ್ಷಣವೂ ದೇಶದ ಬಗ್ಗೆಯೇ ಚಿಂತಿಸುತ್ತಿದ್ದ ಈ ಸಮರ ಸೇನಾನಿಗಳ ತ್ಯಾಗದ ಫಲವೇ ಇಂದಿನ ಸ್ವಾತಂತ್ರ್ಯ.
ಯಾವ ಭಾರತೀಯನೂ ಮರೆಯಲು ಸಾಧ್ಯವೇ ಇಲ್ಲದ ದಿನ ಇದು. ಸ್ವಾತಂತ್ರ್ಯ ಸಂಗ್ರಾಮದ ಒಂದೊಂದು ಕತೆಗಳನ್ನು ಕೇಳಿದಾಗಲೂ, ಒಂದೊಂದು ಕ್ಷಣವನ್ನು ನೆನಪಿಸಿಕೊಳ್ಳುವಾಗಲೂ ದೇಶ ಪ್ರೇಮದ ಕಿಚ್ಚು ನಮ್ಮಲ್ಲಿ ಅಧಿಕವಾಗುತ್ತಲೇ ಸಾಗುತ್ತದೆ. ಇದೇ ಕಾರಣಕ್ಕೆ ಆಗಸ್ಟ್ 15 ಎಂದರೆ ಎಲ್ಲರ ಬದುಕಿನಲ್ಲೂ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ.
ನಮ್ಮ ದೇಶಕ್ಕಾಗಿ ಜೀವ ತೆತ್ತ ಅದೆಷ್ಟೋ ಕೆಚ್ಚೆದೆಯ ವೀರರ ತ್ಯಾಗ ಬಲಿದಾನವನ್ನು ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮ ದೇಶವನ್ನು ಕಟ್ಟಲು ಶ್ರಮಿಸಿದ ಪ್ರತಿಯೊಬ್ಬರು ಹಾಕಿಕೊಟ್ಟ ದೇಶಪ್ರೇಮ, ಪ್ರಾಮಾಣಿಕತೆಯ ಹಾದಿಯಲ್ಲಿ ಮುನ್ನಡೆಯುವುದು ಕೂಡಾ ಬಲು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡೋಣ.
ಸರ್ವರಿಗೂ 75ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ